<p><strong>ನವದೆಹಲಿ: </strong>ಆರ್ಥಿಕವಾಗಿ ದುರ್ಬಲ ವರ್ಗಗಳ (ಇಡಬ್ಲ್ಯುಎಸ್ ) ಅಭ್ಯರ್ಥಿಗಳಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಕುರಿತುಕೇರಳ ಹೈಕೋರ್ಟ್ ವಿಚಾರಣೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ.</p>.<p>ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ಅವರಿರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.</p>.<p>ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇರಳ ಹೈಕೋರ್ಟ್ನ ವಿಚಾರಣೆಗೆ ತಡೆ ನೀಡಬೇಕು ಹಾಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿರುವ ನುಜೈಮ್ ಪಿ.ಕೆ ಅವರಿಗೆ ನೋಟಿಸ್ ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.</p>.<p>'ಇದೇ ವಿಷಯವಾಗಿ ಹಲವಾರು ಅರ್ಜಿಗಳು ಸುಪ್ರೀಂಕೋರ್ಟ್ ಮುಂದಿದ್ದು, ವಿಚಾರಣೆ ಬಾಕಿ ಇದೆ. ಕೇರಳ ಹೈಕೋರ್ಟ್ನಲ್ಲಿನ ಈ ಅರ್ಜಿಯನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಬೇಕು. ಇದರಿಂದ ಒಟ್ಟಿಗೇ ಎಲ್ಲ ಅರ್ಜಿಗಳ ವಿಚಾರಣೆ ಸಾಧ್ಯವಾಗುವುದು’ ಎಂದೂ ಮೆಹ್ತಾ ಮನವಿ ಮಾಡಿದರು.</p>.<p>ಕೇಂದ್ರದ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ, ಅರ್ಜಿದಾರ ಹಾಗೂ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಆರ್ಥಿಕವಾಗಿ ದುರ್ಬಲ ವರ್ಗಗಳ (ಇಡಬ್ಲ್ಯುಎಸ್ ) ಅಭ್ಯರ್ಥಿಗಳಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಕುರಿತುಕೇರಳ ಹೈಕೋರ್ಟ್ ವಿಚಾರಣೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ.</p>.<p>ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ಅವರಿರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.</p>.<p>ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇರಳ ಹೈಕೋರ್ಟ್ನ ವಿಚಾರಣೆಗೆ ತಡೆ ನೀಡಬೇಕು ಹಾಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿರುವ ನುಜೈಮ್ ಪಿ.ಕೆ ಅವರಿಗೆ ನೋಟಿಸ್ ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.</p>.<p>'ಇದೇ ವಿಷಯವಾಗಿ ಹಲವಾರು ಅರ್ಜಿಗಳು ಸುಪ್ರೀಂಕೋರ್ಟ್ ಮುಂದಿದ್ದು, ವಿಚಾರಣೆ ಬಾಕಿ ಇದೆ. ಕೇರಳ ಹೈಕೋರ್ಟ್ನಲ್ಲಿನ ಈ ಅರ್ಜಿಯನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಬೇಕು. ಇದರಿಂದ ಒಟ್ಟಿಗೇ ಎಲ್ಲ ಅರ್ಜಿಗಳ ವಿಚಾರಣೆ ಸಾಧ್ಯವಾಗುವುದು’ ಎಂದೂ ಮೆಹ್ತಾ ಮನವಿ ಮಾಡಿದರು.</p>.<p>ಕೇಂದ್ರದ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ, ಅರ್ಜಿದಾರ ಹಾಗೂ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>