ಸ್ಥಳೀಯ ನಗರಾಡಳಿತ ಸಂಸ್ಥೆಗಳ ವಿರುದ್ಧ ಎನ್ಜಿಟಿ ಫೆಬ್ರುವರಿ 4ರಂದು ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ಉತ್ತರ ದೆಹಲಿ ಮತ್ತು ದಕ್ಷಿಣ ದೆಹಲಿಯ ಮುನಿಸಿಪಲ್ ಕಾರ್ಪೋರೇಷನ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಮೇಲ್ಮನವಿ ಸಲ್ಲಿಸಿದವರಿಗೆ ಯಾವುದೇ ಸೂಚನೆ ನೀಡದೆ, ಎನ್ಜಿಟಿ ಆದೇಶ ಹೊರಡಿಸಿದೆ ಎಂದರು.