<p><strong>ನವದೆಹಲಿ:</strong> ಅತ್ಯಾಚಾರ ಪ್ರಕರಣವೊಂದರಲ್ಲಿ ಸಂತ್ರಸ್ತೆಯ ಹೆಸರನ್ನು ಉಲ್ಲೇಖಿಸಿ ಛತ್ತೀಸಗಡದ ಸೆಷನ್ಸ್ ನ್ಯಾಯಾಲಯವು ನೀಡಿರುವ ತೀರ್ಪನ್ನು ಗಮನಿಸಿರುವ ಸುಪ್ರೀಂ ಕೋರ್ಟ್, ಇಂಥ ವಿಷಯಗಳಲ್ಲಿ ತೀರ್ಪು ನೀಡುವಾಗ ಎಲ್ಲಾ ಅಧೀನ ನ್ಯಾಯಾಲಯಗಳು ಜಾಗರೂಕವಾಗಿರಬೇಕು ಎಂದು ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಅವರ ನೇತೃತ್ವದ ನ್ಯಾಯಪೀಠವು, ‘ಅತ್ಯಾಚಾರದಂಥ ಪ್ರಕರಣಗಳಲ್ಲಿ ಸಂತ್ರಸ್ತೆಯ ಹೆಸರನ್ನು ವಿಚಾರಣೆಯ ಯಾವುದೇ ಹಂತದಲ್ಲೂ ಉಲ್ಲೇಖಿಸಬಾರದು’ ಎಂದು ತಿಳಿಸಿದೆ.</p>.<p>‘ಆದರೆ, ಛತ್ತೀಸಗಡದ ಸೆಷನ್ಸ್ ನ್ಯಾಯಾಲಯದ ತೀರ್ಪಿನಲ್ಲಿ ಸಂತ್ರಸ್ತೆಯ ಹೆಸರು ಉಲ್ಲೇಖಿಸಿರುವುದನ್ನು ಅಪವಾದವೆಂದು ನಾವು ಪರಿಗಣಿಸಲಾಗದು. ಭವಿಷ್ಯದಲ್ಲಿ ಇಂಥ ಪ್ರಕರಣಗಳಲ್ಲಿ ಅಧೀನ ನ್ಯಾಯಾಲಯಗಳು ಜಾಗರೂಕತೆಯಿಂದ ನಡೆದುಕೊಳ್ಳಬೇಕು’ ಎಂದೂ ನ್ಯಾಯಮೂರ್ತಿಗಳಾದ ವಿನೀತ್ ಶರಣ್ ಮತ್ತು ಎಂ.ಆರ್. ಷಾ ಅವರನ್ನೊಳಗೊಂಡ ಪೀಠವು ಅಭಿಪ್ರಾಯಪಟ್ಟಿದೆ.</p>.<p>‘ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮತ್ತು ಇಂಥ ಪ್ರಕರಣಗಳಲ್ಲಿ ಮರಣ ಹೊಂದಿದ ಸಂತ್ರಸ್ತೆಯ ಹೆಸರು ಮತ್ತು ಗುರುತನ್ನು ಯಾವ ಹಂತದಲ್ಲೂ ಬಹಿರಂಗಪಡಿಸಲಾಗುವುದಿಲ್ಲ’ ಎಂದು ಸುಪ್ರೀಂ ಕೋರ್ಟ್ 2018ರ ಡಿಸೆಂಬರ್ನಲ್ಲಿ ನೀಡಿದ ತೀರ್ಪಿನಲ್ಲಿ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅತ್ಯಾಚಾರ ಪ್ರಕರಣವೊಂದರಲ್ಲಿ ಸಂತ್ರಸ್ತೆಯ ಹೆಸರನ್ನು ಉಲ್ಲೇಖಿಸಿ ಛತ್ತೀಸಗಡದ ಸೆಷನ್ಸ್ ನ್ಯಾಯಾಲಯವು ನೀಡಿರುವ ತೀರ್ಪನ್ನು ಗಮನಿಸಿರುವ ಸುಪ್ರೀಂ ಕೋರ್ಟ್, ಇಂಥ ವಿಷಯಗಳಲ್ಲಿ ತೀರ್ಪು ನೀಡುವಾಗ ಎಲ್ಲಾ ಅಧೀನ ನ್ಯಾಯಾಲಯಗಳು ಜಾಗರೂಕವಾಗಿರಬೇಕು ಎಂದು ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಅವರ ನೇತೃತ್ವದ ನ್ಯಾಯಪೀಠವು, ‘ಅತ್ಯಾಚಾರದಂಥ ಪ್ರಕರಣಗಳಲ್ಲಿ ಸಂತ್ರಸ್ತೆಯ ಹೆಸರನ್ನು ವಿಚಾರಣೆಯ ಯಾವುದೇ ಹಂತದಲ್ಲೂ ಉಲ್ಲೇಖಿಸಬಾರದು’ ಎಂದು ತಿಳಿಸಿದೆ.</p>.<p>‘ಆದರೆ, ಛತ್ತೀಸಗಡದ ಸೆಷನ್ಸ್ ನ್ಯಾಯಾಲಯದ ತೀರ್ಪಿನಲ್ಲಿ ಸಂತ್ರಸ್ತೆಯ ಹೆಸರು ಉಲ್ಲೇಖಿಸಿರುವುದನ್ನು ಅಪವಾದವೆಂದು ನಾವು ಪರಿಗಣಿಸಲಾಗದು. ಭವಿಷ್ಯದಲ್ಲಿ ಇಂಥ ಪ್ರಕರಣಗಳಲ್ಲಿ ಅಧೀನ ನ್ಯಾಯಾಲಯಗಳು ಜಾಗರೂಕತೆಯಿಂದ ನಡೆದುಕೊಳ್ಳಬೇಕು’ ಎಂದೂ ನ್ಯಾಯಮೂರ್ತಿಗಳಾದ ವಿನೀತ್ ಶರಣ್ ಮತ್ತು ಎಂ.ಆರ್. ಷಾ ಅವರನ್ನೊಳಗೊಂಡ ಪೀಠವು ಅಭಿಪ್ರಾಯಪಟ್ಟಿದೆ.</p>.<p>‘ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮತ್ತು ಇಂಥ ಪ್ರಕರಣಗಳಲ್ಲಿ ಮರಣ ಹೊಂದಿದ ಸಂತ್ರಸ್ತೆಯ ಹೆಸರು ಮತ್ತು ಗುರುತನ್ನು ಯಾವ ಹಂತದಲ್ಲೂ ಬಹಿರಂಗಪಡಿಸಲಾಗುವುದಿಲ್ಲ’ ಎಂದು ಸುಪ್ರೀಂ ಕೋರ್ಟ್ 2018ರ ಡಿಸೆಂಬರ್ನಲ್ಲಿ ನೀಡಿದ ತೀರ್ಪಿನಲ್ಲಿ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>