<p><strong>ನವದೆಹಲಿ</strong>:ಕೇರಳದ ಕೆಲ ಪ್ರದೇಶಗಳಲ್ಲಿಕೋವಿಡ್ ದೃಢಪ್ರಮಾಣ ಈಗಲೂ ಹೆಚ್ಚಿದೆ. ಹೀಗಿದ್ದರೂ, ಬಕ್ರೀದ್ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಿಸಲು ಅನುಮತಿ ನೀಡಿರುವ ಆ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.</p>.<p>ನಿರ್ಬಂಧಗಳ ಸಡಿಲಿಕೆಯಿಂದಾಗಿ ಕೊರೊನಾ ಸೋಂಕು ಮತ್ತಷ್ಟು ವ್ಯಾಪಕವಾಗುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಸುಪ್ರೀಂಕೋರ್ಟ್ ಎಚ್ಚರಿಸಿದೆ.</p>.<p>ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಎಫ್.ನರೀಮನ್ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠ, ‘ಕೇರಳ ಸರ್ಕಾರದ ರೀತಿಯಲ್ಲೇ ನಿರ್ಬಂಧಗಳ ಸಡಿಲಿಕೆಗೆ ಅನುಮತಿ ನೀಡುವ ಮೂಲಕ ದೇಶದ ಜನತೆಯನ್ನು ಕೋವಿಡ್ ಸಂಕಷ್ಟಕ್ಕೆ ದೂಡಿದಂತಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿತು.</p>.<p><strong>ಇದನ್ನೂ ಓದಿ:</strong><a href="https://cms.prajavani.net/india-news/supreme-court-asks-kerala-to-respond-to-plea-against-3-day-relaxation-in-covid-restrictions-849566.html" itemprop="url">ಕೋವಿಡ್ ನಿಯಮ ಸಡಿಲಿಕೆ ವಿರುದ್ಧ ಅರ್ಜಿ; ಪ್ರತಿಕ್ರಿಯೆಗೆ ಕೇರಳ ಸರ್ಕಾರಕ್ಕೆ ಸೂಚನೆ </a></p>.<p>‘ಸಂವಿಧಾನದ 21ನೇ ವಿಧಿ ಎಲ್ಲರಿಗೂ ಬದುಕುವ ಹಕ್ಕನ್ನು ನೀಡಿದೆ. ಕೇರಳ ಸರ್ಕಾರ ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು’ ಎಂದೂ ನ್ಯಾಯಪೀಠ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:ಕೇರಳದ ಕೆಲ ಪ್ರದೇಶಗಳಲ್ಲಿಕೋವಿಡ್ ದೃಢಪ್ರಮಾಣ ಈಗಲೂ ಹೆಚ್ಚಿದೆ. ಹೀಗಿದ್ದರೂ, ಬಕ್ರೀದ್ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಿಸಲು ಅನುಮತಿ ನೀಡಿರುವ ಆ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.</p>.<p>ನಿರ್ಬಂಧಗಳ ಸಡಿಲಿಕೆಯಿಂದಾಗಿ ಕೊರೊನಾ ಸೋಂಕು ಮತ್ತಷ್ಟು ವ್ಯಾಪಕವಾಗುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಸುಪ್ರೀಂಕೋರ್ಟ್ ಎಚ್ಚರಿಸಿದೆ.</p>.<p>ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಎಫ್.ನರೀಮನ್ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠ, ‘ಕೇರಳ ಸರ್ಕಾರದ ರೀತಿಯಲ್ಲೇ ನಿರ್ಬಂಧಗಳ ಸಡಿಲಿಕೆಗೆ ಅನುಮತಿ ನೀಡುವ ಮೂಲಕ ದೇಶದ ಜನತೆಯನ್ನು ಕೋವಿಡ್ ಸಂಕಷ್ಟಕ್ಕೆ ದೂಡಿದಂತಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿತು.</p>.<p><strong>ಇದನ್ನೂ ಓದಿ:</strong><a href="https://cms.prajavani.net/india-news/supreme-court-asks-kerala-to-respond-to-plea-against-3-day-relaxation-in-covid-restrictions-849566.html" itemprop="url">ಕೋವಿಡ್ ನಿಯಮ ಸಡಿಲಿಕೆ ವಿರುದ್ಧ ಅರ್ಜಿ; ಪ್ರತಿಕ್ರಿಯೆಗೆ ಕೇರಳ ಸರ್ಕಾರಕ್ಕೆ ಸೂಚನೆ </a></p>.<p>‘ಸಂವಿಧಾನದ 21ನೇ ವಿಧಿ ಎಲ್ಲರಿಗೂ ಬದುಕುವ ಹಕ್ಕನ್ನು ನೀಡಿದೆ. ಕೇರಳ ಸರ್ಕಾರ ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು’ ಎಂದೂ ನ್ಯಾಯಪೀಠ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>