ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್, ಮಕ್ಕಳ ಹಕ್ಕುಗಳ ಸಮಿತಿಯ ಮಾಜಿ ಅಧ್ಯಕ್ಷೆ ಶಾಂತ ಸಿನ್ಹಾ, ಎಸ್.ಜಿ. ಒಂಬತ್ತುಕರೆ ಮತ್ತು ಇತರರು ಅರ್ಜಿ ಸಲ್ಲಿಸಿದ್ದಾರೆ. ಜನರ ಖಾಸಗಿತನದ ಹಕ್ಕು ಮತ್ತು ವೈಯಕ್ತಿಕ ಘನತೆಯನ್ನು ಸಮತೋಲನದಲ್ಲಿ ನೋಡಲಾಗಿದೆ. ಲಕ್ಷಾಂತರ ಜನರಿಗೆ ಸೌಲಭ್ಯ ಒದಗಿಸುವ ದೊಡ್ಡ ಉದ್ದೇಶವನ್ನೂ ಆಧಾರ್ ಹೊಂದಿದೆ. ಆಧಾರ್ ಜೋಡಣೆಯು ಸೌಲಭ್ಯ ಮತ್ತು ಸಹಾಯಧನ ನೀಡಿಕೆಗೆ ಸೀಮಿತವಾಗಬೇಕು ಎಂದು2018ರ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು.