ನ್ಯಾಯಮೂರ್ತಿಗಳ ವಿರುದ್ಧವೇ ಆರೋಪ ಕೇಳಿಬಂದಾಗ, ಅಂತಹ ಪ್ರಕರಣದ ನ್ಯಾಯಾಂಗ ನಿಂದನೆ ವಿಚಾರಣೆ ಪ್ರಕ್ರಿಯೆ ಹೇಗಿರಬೇಕು ಎಂಬ ಬಗ್ಗೆವಕೀಲರ ವಾದಮಂಡನೆ ಕೇಳಲು ಸಿದ್ಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ.‘ಇಂಥ ಹೇಳಿಕೆಗಳನ್ನು ನೀಡಬಹುದೇ ಮತ್ತು ಇವುಗಳನ್ನು ನಿಭಾಯಿಸಲು ಯಾವ ವಿಧಾನವನ್ನು ಅನುಸರಿಬೇಕು ಎನ್ನುವುದರ ಕುರಿತು ಅಭಿಪ್ರಾಯ ಕೇಳಲು ಸಿದ್ಧವಿದೆ’ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು ಹೇಳಿತು.