ಪ್ರಕರಣಕ್ಕೆ ಸಂಬಂಧಿಸಿ, ಆಗಸ್ಟ್ 6ರಂದು ಹೈಕೋರ್ಟ್ ನೀಡಿದ್ದ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿರುವ ದಿಲಾವರ್ ಅವರು, ‘ರಾಷ್ಟ್ರೀಯ ಪಕ್ಷವೆಂಬ ಮಾನ್ಯತೆ ಪಡೆದಿರುವ ಬಿಎಸ್ಪಿಯು ಎಲ್ಲೂ, ಯಾವುದೇ ರಾಜಕೀಯ ಪಕ್ಷದ ಜತೆಗೆ ವಿಲೀನವಾಗಿಲ್ಲ. ಸ್ಪೀಕರ್ ಅವರ ಕಾನೂನುಬಾಹಿರ ಆದೇಶವನ್ನು ಗ್ರಹಿಸುವಲ್ಲಿ ಕೋರ್ಟ್ ವಿಫಲವಾಗಿದೆ’ ಎಂದಿದ್ದಾರೆ. ಜತೆಗೆ, ಆಗಸ್ಟ್ 14ರಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಈ ಆರು ಮಂದಿ ಶಾಸಕರಿಗೆ ಮತದಾನದ ಅವಕಾಶ ನೀಡಬಾರದು’ ಎಂದು ದಿಲಾವರ್ ಮನವಿ ಮಾಡಿದ್ದಾರೆ.