ಈ ಪ್ರಕರಣವನ್ನು ಆಲಿಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಎಲ್.ಎನ್. ರಾವ್ ಮತ್ತು ಎಸ್. ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠವು, ‘ಐಪಿಸಿ 124ಎ (ದೇಶದ್ರೋಹ), ಐಪಿಸಿ 153 (ಎರಡು ಗುಂಪುಗಳ ನಡುವೆ ದ್ವೇಷ ಪ್ರಚೋದನೆ) ನಿಬಂಧನೆಗಳ ಅರ್ಥವಿವರಣೆಯ ಅಗತ್ಯವಿದೆ ಎಂಬುದನ್ನು ನಾವು ಮನಗಂಡಿದ್ದೇವೆ. ವಿಶೇಷವಾಗಿ ಪತ್ರಿಕಾ ಮತ್ತು ವಾಕ್ ಸ್ವಾತಂತ್ರ್ಯದ ಹಕ್ಕು ಹಿನ್ನೆಲೆಯಲ್ಲಿ ಈ ಕಾನೂನಿನ ವ್ಯಾಖ್ಯಾನವನ್ನು ಪರಿಶೀಲಿಸುವ ಅಗತ್ಯವಿದೆ’ ಎಂದು ತಿಳಿಸಿದೆ.