ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಗಾಸಸ್‌ ತನಿಖೆ ಕೋರಿ ಅರ್ಜಿ: ಮುಂದಿನ ವಾರ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

Last Updated 30 ಜುಲೈ 2021, 7:00 IST
ಅಕ್ಷರ ಗಾತ್ರ

ನವದೆಹಲಿ: ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿಪೆಗಾಸಸ್ ಗೂಢಚರ್ಯೆ ಪ್ರಕರಣದ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಹಿರಿಯ ಪತ್ರಕರ್ತರಾದ ಎನ್‌. ರಾಮ್,ಶಶಿ ಕುಮಾರ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಂದಿನ ವಾರ ನಡೆಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ಒಪ್ಪಿಕೊಂಡಿದೆ.

ಹಿರಿಯ ಪತ್ರಕರ್ತರ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಮಾಡಿದ ಮನವಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ನ್ಯಾಯಪೀಠ, ಮುಂದಿನ ವಾರ ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಪೆಗಾಸಸ್ ಗೂಢಚರ್ಯೆ ಕುತಂತ್ರಾಂಶವನ್ನು ಬಳಸಿಕೊಂಡು, ಕೆಲವು ಸಂಸ್ಥೆಗಳು, ಇಲಾಖೆಗಳ ಮತ್ತು ವ್ಯಕ್ತಿಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇಸ್ರೆಲ್‌ನ ಎನ್‌ಎಸ್‌ಒನ ಪೆಗಾಸಸ್ ಗೂಢಚರ್ಯೆ ಕುತಂತ್ರಾಂಶ ಬಳಸಿ 300ಕ್ಕೂ ಹೆಚ್ಚು ಭಾರತೀಯರ ದೂರವಾಣಿ ಸಂಖ್ಯೆಗಳ ಮೇಲೆ ಕಣ್ಗಾವಲು ಇಡಲಾಗಿದೆ ಎಂದು ಅಂತರರಾಷ್ಟ್ರೀಯ ಮಾಧ್ಯಮ ಒಕ್ಕೂಟವೊಂದು ವರದಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT