ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ತಾರ್ ಅನ್ಸಾರಿ ಪ್ರಕರಣ: ಏ.9ಕ್ಕೆ ಅನ್ಸಾರಿ ಪತ್ನಿಯ ಅರ್ಜಿ ವಿಚಾರಣೆ

ರಕ್ಷಣೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಲು ಮನವಿ
Last Updated 7 ಏಪ್ರಿಲ್ 2021, 9:05 IST
ಅಕ್ಷರ ಗಾತ್ರ

ನವದೆಹಲಿ‌: ಪಾತಕಿ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿಯವರಿಗೆ ರಕ್ಷಣೆ ನೀಡಲು ಉತ್ತರಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಅನ್ಸಾರಿ ಪತ್ನಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಕೈಗೆತ್ತಿಕೊಳ್ಳಲಿದೆ.

ಸುಪ್ರೀಂ ಕೋರ್ಟ್‌ನ ಜಾಲತಾಣದ ಮಾಹಿತಿ ಪ್ರಕಾರ, ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್. ಸುಭಾಷ್‌ರೆಡ್ಡಿ ಅವರನ್ನೊಳಗೊಂಡ ಪೀಠ ಏಪ್ರಿಲ್ 9 ರಂದು ಅನ್ಸಾರಿಯವರಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಲಿದೆ.

ಅನ್ಸಾರಿ ವಿರುದ್ಧ ಉತ್ತರ ಪ್ರದೇಶದ ವಿವಿಧೆಡೆ ಸುಲಿಗೆ ಸೇರಿದಂತೆ ಘೋರ ಅಪರಾಧ ಪ್ರಕರಣಗಳು ದಾಖಲಾಗಿವೆ.

ಉತ್ತರಪ್ರದೇಶದಲ್ಲಿ ಅನ್ಸಾರಿ ಅವರ ಜೀವಕ್ಕೆ ‘ನಿಜವಾದ, ನಿರಂತರ ಮತ್ತು ಗಂಭೀರ ಬೆದರಿಕೆ‘ ಇದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ ಆರೋಪಿಸಲಾಗಿದೆ. ನ್ಯಾಯಾಲಯ ಅವರ ಜೀವಕ್ಕೆ ರಕ್ಷಣೆ ನೀಡಲು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶಿಸದಿದ್ದರೆ, ಅವರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಈ ಹಿಂದೆ ಉತ್ತರ ಪ್ರದೇಶ ಸರ್ಕಾರದಲ್ಲಿರುವ ಪ್ರತಿಸ್ಪರ್ಧಿ ಪಕ್ಷಗಳ ರಾಜಕೀಯ ಶತ್ರುಗಳು ಅನ್ಸಾರಿ ಅವರನ್ನು ಕೊಲ್ಲುವ ಪ್ರಯತ್ನ ಮಾಡಿದ್ದರು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT