<p class="title"><strong>ನವದೆಹಲಿ:</strong> ‘ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಮತ್ತೆ ಪರೀಕ್ಷೆಗೆ ಹಾಜರಾಗಿದ್ದ ಸಿಬಿಎಸ್ಇ 12ನೇ ತರಗತಿಯ ಕೆಲ ವಿದ್ಯಾರ್ಥಿಗಳು, ‘ಮೂಲ ಫಲಿತಾಂಶವನ್ನೇ ಉಳಿಸಿಕೊಳ್ಳಲು ಅವಕಾಶ ನೀಡುವಂತೆ ಮಂಡಳಿಗೆ ನಿರ್ದೇಶನ ನೀಡಬೇಕು’ ಎಂದು ಕೋರಿ ಸಲ್ಲಿಸಿರುವ ಅರ್ಜಿಯನ್ನು ಡಿಸೆಂಬರ್ 6ರಂದು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p class="title">11 ವಿದ್ಯಾರ್ಥಿಗಳು ಈ ಸಂಬಂಧ ಅರ್ಜಿ ಸಲ್ಲಿಸಿದ್ದರು. 30:30:40 ಸೂತ್ರದಡಿ ಈ ಮುನ್ನ ಮಂಡಳಿ ಘೋಷಿಸಿದ್ದ ಫಲಿತಾಂಶದಲ್ಲಿ ಇವರು ಉತ್ತೀರ್ಣರಾಗಿದ್ದರು. ಫಲಿತಾಂಶ ಸುಧಾರಣೆಗಾಗಿ ಆಗಸ್ಟ್–ಸೆಪ್ಟೆಂಬರ್ ತಿಂಗಳಲ್ಲಿ ಮತ್ತೊಮ್ಮೆ ಪರೀಕ್ಷೆಗೆ ಹಾಜರಾಗಿದ್ದರು.</p>.<p>ಪರೀಕ್ಷೆಯ ಬಳಿಕ ಈ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಎಂದು ಘೋಷಿಸಿಲ್ಲ ಅಥವಾ ಕಡಿಮೆ ಅಂಕಗಳನ್ನು ನೀಡಲಾಗಿಲ್ಲ. ಆದರೆ, ಈ ಮೊದಲು ಘೋಷಿಸಿದ್ದ ಫಲಿತಾಂಶ ರದ್ದುಪಡಿಸಲಾಗುತ್ತದೆ ಎಂಬ ಆತಂಕಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.</p>.<p>ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಸಿ.ಟಿ.ರವಿಕುಮಾರ್ ಅವರಿದ್ದ ನ್ಯಾಯಪೀಠದ ಎದುರು ಅರ್ಜಿ ಬಂದಾಗ, ಸಿಬಿಎಸ್ಇ ಪ್ರತಿನಿಧಿಸಿದ್ದ ವಕೀಲರು, ‘ನನಗೆ ಭಾನುವಾರವಷ್ಟೇ ಈ ಅರ್ಜಿಯ ಪ್ರತಿ ತಲುಪಿದೆ. ಸ್ವಲ್ಪ ಸಮಯ ಬೇಕು’ ಎಂದರು. ತದನಂತರ ಪೀಠವು ಅರ್ಜಿಯನ್ನು ಡಿಸೆಂಬರ್ 6ರಂದು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ‘ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಮತ್ತೆ ಪರೀಕ್ಷೆಗೆ ಹಾಜರಾಗಿದ್ದ ಸಿಬಿಎಸ್ಇ 12ನೇ ತರಗತಿಯ ಕೆಲ ವಿದ್ಯಾರ್ಥಿಗಳು, ‘ಮೂಲ ಫಲಿತಾಂಶವನ್ನೇ ಉಳಿಸಿಕೊಳ್ಳಲು ಅವಕಾಶ ನೀಡುವಂತೆ ಮಂಡಳಿಗೆ ನಿರ್ದೇಶನ ನೀಡಬೇಕು’ ಎಂದು ಕೋರಿ ಸಲ್ಲಿಸಿರುವ ಅರ್ಜಿಯನ್ನು ಡಿಸೆಂಬರ್ 6ರಂದು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p class="title">11 ವಿದ್ಯಾರ್ಥಿಗಳು ಈ ಸಂಬಂಧ ಅರ್ಜಿ ಸಲ್ಲಿಸಿದ್ದರು. 30:30:40 ಸೂತ್ರದಡಿ ಈ ಮುನ್ನ ಮಂಡಳಿ ಘೋಷಿಸಿದ್ದ ಫಲಿತಾಂಶದಲ್ಲಿ ಇವರು ಉತ್ತೀರ್ಣರಾಗಿದ್ದರು. ಫಲಿತಾಂಶ ಸುಧಾರಣೆಗಾಗಿ ಆಗಸ್ಟ್–ಸೆಪ್ಟೆಂಬರ್ ತಿಂಗಳಲ್ಲಿ ಮತ್ತೊಮ್ಮೆ ಪರೀಕ್ಷೆಗೆ ಹಾಜರಾಗಿದ್ದರು.</p>.<p>ಪರೀಕ್ಷೆಯ ಬಳಿಕ ಈ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಎಂದು ಘೋಷಿಸಿಲ್ಲ ಅಥವಾ ಕಡಿಮೆ ಅಂಕಗಳನ್ನು ನೀಡಲಾಗಿಲ್ಲ. ಆದರೆ, ಈ ಮೊದಲು ಘೋಷಿಸಿದ್ದ ಫಲಿತಾಂಶ ರದ್ದುಪಡಿಸಲಾಗುತ್ತದೆ ಎಂಬ ಆತಂಕಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.</p>.<p>ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಸಿ.ಟಿ.ರವಿಕುಮಾರ್ ಅವರಿದ್ದ ನ್ಯಾಯಪೀಠದ ಎದುರು ಅರ್ಜಿ ಬಂದಾಗ, ಸಿಬಿಎಸ್ಇ ಪ್ರತಿನಿಧಿಸಿದ್ದ ವಕೀಲರು, ‘ನನಗೆ ಭಾನುವಾರವಷ್ಟೇ ಈ ಅರ್ಜಿಯ ಪ್ರತಿ ತಲುಪಿದೆ. ಸ್ವಲ್ಪ ಸಮಯ ಬೇಕು’ ಎಂದರು. ತದನಂತರ ಪೀಠವು ಅರ್ಜಿಯನ್ನು ಡಿಸೆಂಬರ್ 6ರಂದು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>