ಈ ಹಿಂದೆ ಇದೇ ಪ್ರಕರಣದ ವಿಚಾರಣೆಯ ವೇಳೆ, ನ್ಯಾಯಾಲಯವು, ಕೇಂದ್ರ ಸರ್ಕಾರಕ್ಕೆ ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸುವಂತೆ ಕೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ತುಷಾರ್ ಮೆಹ್ತಾ ಅವರು, ‘ಸಂತ್ರಸ್ತ ಕುಟುಂಬವನ್ನು ಕೇಂದ್ರ ಸರ್ಕಾರ ಸಂಪರ್ಕಿಸಿ, ಬಾಕಿಯಿದ್ದ ಪರಿಹಾರವನ್ನೂ ನೀಡಿದೆ‘ ಎಂದು ಹೇಳಿದ್ದರು. ನಂತರ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತ್ತು.