’ಪೊಲೀಸರು ಬೆಳಿಗ್ಗೆ 9 ಗಂಟೆಗೆ ಅವರ ಮನೆಗೆ ಭೇಟಿ ನೀಡಿದ ವೇಳೆ ಬೀಗ ಹಾಕಲಾಗಿತ್ತು. ಮಂಗಳವಾರವಷ್ಟೇ ರೋಹಿತ್ ಅವರನ್ನು ನೊಯ್ಡಾ ಪೊಲೀಸರು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ಈ ವಿಷಯವನ್ನು ಅವರು ರಾಯಪುರ ಪೊಲೀಸರಿಗೆ ತಿಳಿಸಿರಲಿಲ್ಲ. ಸಂಜೆ ಪತ್ರಿಕಾ ಹೇಳಿಕೆಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಿರುವುದಾಗಿ ಹೇಳಿದ್ದರು‘ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಅಗರವಾಲ್ ತಿಳಿಸಿದ್ದಾರೆ.