<p><strong>ನವದೆಹಲಿ:</strong> ವಿವಾದಿತ ಕೃಷಿ ಕಾಯ್ದೆಗಳು ಮತ್ತು ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಕುರಿತು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.</p>.<p>ಕೃಷಿ ಕಾಯ್ದೆಗಳಿಂದ ಉಂಟಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಸುಪ್ರೀಂ ಕೋರ್ಟ್ ನೇಮಿಸಿರುವ ನಾಲ್ವರು ಸದಸ್ಯರ ಸಮಿತಿಯಿಂದ ಹೊರಬರುವುದಾಗಿ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಭೂಪಿಂದರ್ ಸಿಂಗ್ ಮಾನ್ ಗುರುವಾರ ಹೇಳಿದ್ದರು. ಈ ವಿಷಯವನ್ನು ಸಹ ನ್ಯಾಯಾಲಯ ಇದೇ ಸಂದರ್ಭದಲ್ಲಿ ವಿಚಾರಣೆಗೆ ಪರಿಗಣಿಸಲಿದೆ.</p>.<p>ಜನವರಿ 26ರಂದು ರೈತ ಸಂಘಟನೆಗಳು ನಡೆಸಲಿರುವ ಟ್ರ್ಯಾಕ್ಟರ್ ರ್ಯಾಲಿ ಅಥವಾ ಯಾವುದೇ ರೀತಿಯ ಪ್ರತಿಭಟನೆಗೆ ತಡೆಯಾಜ್ಞೆ ನೀಡಬೇಕು ಎಂದು ದೆಹಲಿ ಪೊಲೀಸ್ ಮೂಲಕ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ನಡೆಯಲಿದೆ.</p>.<p>ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ್ ರಾವ್ ಮತ್ತು ವಿನೀತ್ ಸರಣ್ ಅವರನ್ನೊಳಗೊಂಡ ಪೀಠವು ಈ ಅರ್ಜಿಗಳ ವಿಚಾರಣೆ ನಡೆಸಲಿದೆ. ಜತೆಗೆ, ಮಾನ್ ಅವರ ಬದಲಿಗೆ ಮತ್ತೊಬ್ಬ ಸದಸ್ಯರನ್ನು ನೇಮಿಸುವ ಸಾಧ್ಯತೆಯೂ ಇದೆ.</p>.<p>ಸುಪ್ರಿಂ ಕೋರ್ಟ್ ನೇಮಿಸಿರುವ ಸಮಿತಿಯ ಇತರ ಮೂವರು ಸದಸ್ಯರು ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ. ಹೀಗಾಗಿ, ಇವರನ್ನು ಸಮಿತಿಯಿಂದ ತೆಗೆದುಹಾಕಿ, ಪರಸ್ಪರ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸುವಂತಹ ತಜ್ಞರನ್ನು ನೇಮಿಸಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ ಲೋಕಶಕ್ತಿ ಸಂಘಟನೆ ಶನಿವಾರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿವಾದಿತ ಕೃಷಿ ಕಾಯ್ದೆಗಳು ಮತ್ತು ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಕುರಿತು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.</p>.<p>ಕೃಷಿ ಕಾಯ್ದೆಗಳಿಂದ ಉಂಟಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಸುಪ್ರೀಂ ಕೋರ್ಟ್ ನೇಮಿಸಿರುವ ನಾಲ್ವರು ಸದಸ್ಯರ ಸಮಿತಿಯಿಂದ ಹೊರಬರುವುದಾಗಿ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಭೂಪಿಂದರ್ ಸಿಂಗ್ ಮಾನ್ ಗುರುವಾರ ಹೇಳಿದ್ದರು. ಈ ವಿಷಯವನ್ನು ಸಹ ನ್ಯಾಯಾಲಯ ಇದೇ ಸಂದರ್ಭದಲ್ಲಿ ವಿಚಾರಣೆಗೆ ಪರಿಗಣಿಸಲಿದೆ.</p>.<p>ಜನವರಿ 26ರಂದು ರೈತ ಸಂಘಟನೆಗಳು ನಡೆಸಲಿರುವ ಟ್ರ್ಯಾಕ್ಟರ್ ರ್ಯಾಲಿ ಅಥವಾ ಯಾವುದೇ ರೀತಿಯ ಪ್ರತಿಭಟನೆಗೆ ತಡೆಯಾಜ್ಞೆ ನೀಡಬೇಕು ಎಂದು ದೆಹಲಿ ಪೊಲೀಸ್ ಮೂಲಕ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ನಡೆಯಲಿದೆ.</p>.<p>ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ್ ರಾವ್ ಮತ್ತು ವಿನೀತ್ ಸರಣ್ ಅವರನ್ನೊಳಗೊಂಡ ಪೀಠವು ಈ ಅರ್ಜಿಗಳ ವಿಚಾರಣೆ ನಡೆಸಲಿದೆ. ಜತೆಗೆ, ಮಾನ್ ಅವರ ಬದಲಿಗೆ ಮತ್ತೊಬ್ಬ ಸದಸ್ಯರನ್ನು ನೇಮಿಸುವ ಸಾಧ್ಯತೆಯೂ ಇದೆ.</p>.<p>ಸುಪ್ರಿಂ ಕೋರ್ಟ್ ನೇಮಿಸಿರುವ ಸಮಿತಿಯ ಇತರ ಮೂವರು ಸದಸ್ಯರು ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ. ಹೀಗಾಗಿ, ಇವರನ್ನು ಸಮಿತಿಯಿಂದ ತೆಗೆದುಹಾಕಿ, ಪರಸ್ಪರ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸುವಂತಹ ತಜ್ಞರನ್ನು ನೇಮಿಸಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ ಲೋಕಶಕ್ತಿ ಸಂಘಟನೆ ಶನಿವಾರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>