ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್. ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠವು, ‘ಒಂದು ಪ್ರಕರಣದಲ್ಲಿ ಜಾಮೀನು ಪಡೆದ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ಜುಬೈರ್ ಅವರನ್ನು ಬಂಧಿಸಲಾಗುತ್ತಿದೆ. ಎಲ್ಲ ಎಫ್ಐಆರ್ಗಳು ಒಂದೇ ಗುರಿಯನ್ನು ಹೊಂದಿರುವಂತೆ ತೋರುತ್ತದೆ. ಇದೊಂದು ವಿಷವರ್ತುಲದಂತೆ ಗೋಚರಿಸುತ್ತಿದೆ’ ಎಂದೂ ಹೇಳಿದೆ.