‘ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್ 15ರಂದು ಅಥವಾ ಅದಕ್ಕೂ ಮುಂಚಿತವಾಗಿ ಲಿಖಿತವಾಗಿ ಅಹವಾಲು ಸಲ್ಲಿಸಲು ಮಲ್ಯ ಪರ ವಕೀಲ ಅಂಕುರ್ ಸೈಗಲ್ ಅವರಿಗೆ ಕೊನೆಯ ಅವಕಾಶ ನೀಡಲಾಗುವುದು. ಅಹವಾಲಿನ ಒಂದು ಪ್ರತಿಯನ್ನು ಅಮಿಕಸ್ ಕ್ಯೂರಿ ಅವರಿಗೂ ಸಲ್ಲಿಸಬೇಕು’ ಎಂದಿದ್ದ ನ್ಯಾಯಪೀಠ, ಶಿಕ್ಷೆಯ ಪ್ರಮಾಣ ಕುರಿತ ಆದೇಶವನ್ನು ಕಾಯ್ದಿರಿಸಿತ್ತು.