‘ಮರಾಠರಿಗೆ ಮೀಸಲಾತಿ ನೀಡುವ ಸಂಬಂಧ ಮಹಾರಾಷ್ಟ್ರ ಸರ್ಕಾರ ರೂಪಿಸಿದ್ದ ನಿಯಮವನ್ನು ಬಾಂಬೆ ಹೈಕೋರ್ಟ್ 2019ರ ಜೂನ್ನಲ್ಲಿ ಎತ್ತಿ ಹಿಡಿದಿತ್ತು. ಆದರೆ, ಮೀಸಲಾತಿ ಪ್ರಮಾಣ ಶೇ 16ರಷ್ಟು ನಿಗದಿ ಮಾಡಿರುವುದು ಸಮರ್ಥನೀಯವಲ್ಲ ಎಂದು ಹೇಳಿದ್ದ ಹೈಕೋರ್ಟ್, ಮೀಸಲಾತಿ ಪ್ರಮಾಣ ಉದ್ಯೋಗ ಕ್ಷೇತ್ರದಲ್ಲಿ ಶೇ 12 ಹಾಗೂ ಶಿಕ್ಷಣದಲ್ಲಿ ಶೇ 13ರಷ್ಟು ಮೀರಬಾರದು’ ಎಂದು ಹೇಳಿತ್ತು.