ನವದೆಹಲಿ: ನ್ಯಾಯಾಂಗದ ವಿರುದ್ಧ ಅವಮಾನಕರ ಟ್ವೀಟ್ ಮಾಡಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಲ್ಕು ವಾರ ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕುನಾಲ್ ಅವರು ಸಲ್ಲಿಸಿರುವ ಪ್ರತಿಕ್ರಿಯೆಗೆ ಸ್ಪಷ್ಟನೆ ನೀಡಲು ಕಾಲಾವಕಾಶ ಬೇಕೆಂದು ಕೆಲವು ಅರ್ಜಿದಾರರು ಕೇಳಿದ್ದರಿಂದ, ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್.ಎಸ್.ರೆಡ್ಡಿ ಅವರನ್ನೊಳಗೊಂಡ ನ್ಯಾಯಪೀಠವು ಈ ಅರ್ಜಿ ವಿಚಾರಣೆಯನ್ನು ಮುಂದೂಡಿತು.
ಸುಪ್ರೀಂಕೋರ್ಟ್ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಕ್ಕಾಗಿ ಕಾಮ್ರಾ ಅವರ ವಿರುದ್ಧ ಸುಪ್ರೀಂ ಕೋರ್ಟ್ ಕಳೆದ ವರ್ಷ ಡಿಸೆಂಬರ್ 18 ರಂದು ಶೋ-ಕಾಸ್ ನೋಟಿಸ್ ನೀಡಿತ್ತು.