<p><strong>ನವದೆಹಲಿ:</strong> ಮಾಧ್ಯಮಗಳ ಕಾರ್ಯ ನಿರ್ವಹಣೆಗೆ ಸಂಬಂಧಿಸಿದ ಕಾನೂನಿನ ಚೌಕಟ್ಟಿನ ಪರಿಶೀಲನೆಗೆ ಸಮಿತಿ ಯೊಂದನ್ನು ರಚಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ (ಜ. 25) ಕೈಗೆತ್ತಿಕೊಳ್ಳಲಿದೆ.</p>.<p>ಮುಖ್ಯನ್ಯಾಯಮೂರ್ತಿ ಎಸ್.ಎ. ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ವಿ.ರಾಮಸುಬ್ರಮಣಿಯನ್ ಅವರಿರುವ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.</p>.<p>ಸುಪ್ರೀಂಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಥವಾ ಹಾಲಿ ನ್ಯಾಯ ಮೂರ್ತಿ ನೇತೃತ್ವದಲ್ಲಿ ಪರಿಶೀಲನಾ ಸಮಿತಿ ರಚಿಸುವಂತೆ ಕೋರಿ ಚಿತ್ರ ನಿರ್ಮಾಪಕ ನೀಲೇಶ್ ನವಲಖಾ, ಸಿವಿಲ್ ಎಂಜಿನಿಯರ್ ನಿತಿನ್ ಮೇಮಾನೆ ಜಂಟಿಯಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.</p>.<p>‘ಮುದ್ರಣ, ಎಲೆಕ್ಟ್ರಾನಿಕ್ ಮಾಧ್ಯಮ ಗಳ ವಿರುದ್ಧದ ದೂರುಗಳ ವಿಚಾರಣೆ ಗಾಗಿ ಮಾಧ್ಯಮ ನಾಯಮಂಡಳಿ ಸ್ಥಾಪಿಸಬೇಕು’ ಎಂದು ಕೋರಿದ್ದರು.</p>.<p>‘ಮಾಧ್ಯಮ ಕೂಡ ಒಂದು ವ್ಯವಹಾರ. ಅದರ ಕಾರ್ಯ, ವ್ಯಾಪ್ತಿ ಹಾಗೂ ಪ್ರಭಾವದಿಂದಾಗಿ ಮಾಧ್ಯಮ ಶಕ್ತಿಯುತವೂ ಆಗಿದೆ. ಹೀಗಾಗಿ, ಸಂವಿಧಾನದಲ್ಲಿ ನೀಡಲಾಗಿರುವ ನಿಯ ಮಗಳ ಅನುಸಾರವೇ ಅದರ ನಿಯಂತ್ರಣ ಅಗತ್ಯ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಾಧ್ಯಮಗಳ ಕಾರ್ಯ ನಿರ್ವಹಣೆಗೆ ಸಂಬಂಧಿಸಿದ ಕಾನೂನಿನ ಚೌಕಟ್ಟಿನ ಪರಿಶೀಲನೆಗೆ ಸಮಿತಿ ಯೊಂದನ್ನು ರಚಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ (ಜ. 25) ಕೈಗೆತ್ತಿಕೊಳ್ಳಲಿದೆ.</p>.<p>ಮುಖ್ಯನ್ಯಾಯಮೂರ್ತಿ ಎಸ್.ಎ. ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ವಿ.ರಾಮಸುಬ್ರಮಣಿಯನ್ ಅವರಿರುವ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.</p>.<p>ಸುಪ್ರೀಂಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಥವಾ ಹಾಲಿ ನ್ಯಾಯ ಮೂರ್ತಿ ನೇತೃತ್ವದಲ್ಲಿ ಪರಿಶೀಲನಾ ಸಮಿತಿ ರಚಿಸುವಂತೆ ಕೋರಿ ಚಿತ್ರ ನಿರ್ಮಾಪಕ ನೀಲೇಶ್ ನವಲಖಾ, ಸಿವಿಲ್ ಎಂಜಿನಿಯರ್ ನಿತಿನ್ ಮೇಮಾನೆ ಜಂಟಿಯಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.</p>.<p>‘ಮುದ್ರಣ, ಎಲೆಕ್ಟ್ರಾನಿಕ್ ಮಾಧ್ಯಮ ಗಳ ವಿರುದ್ಧದ ದೂರುಗಳ ವಿಚಾರಣೆ ಗಾಗಿ ಮಾಧ್ಯಮ ನಾಯಮಂಡಳಿ ಸ್ಥಾಪಿಸಬೇಕು’ ಎಂದು ಕೋರಿದ್ದರು.</p>.<p>‘ಮಾಧ್ಯಮ ಕೂಡ ಒಂದು ವ್ಯವಹಾರ. ಅದರ ಕಾರ್ಯ, ವ್ಯಾಪ್ತಿ ಹಾಗೂ ಪ್ರಭಾವದಿಂದಾಗಿ ಮಾಧ್ಯಮ ಶಕ್ತಿಯುತವೂ ಆಗಿದೆ. ಹೀಗಾಗಿ, ಸಂವಿಧಾನದಲ್ಲಿ ನೀಡಲಾಗಿರುವ ನಿಯ ಮಗಳ ಅನುಸಾರವೇ ಅದರ ನಿಯಂತ್ರಣ ಅಗತ್ಯ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>