ಪ್ರತಿ ವರ್ಷ ಆಗಸ್ಟ್ 15ರಂದು ಬೆಳಗ್ಗೆ ಸಾವಿರಾರು ಜನರು, ಮಕ್ಕಳಿಂದ ಗಿಜುಗುಡುತ್ತಿದ್ದ ಕೆಂಪು ಕೋಟೆಯ ಚಿತ್ರಣ ಈ ವರ್ಷ ಸಂಪೂರ್ಣ ಭಿನ್ನವಾಗಿತ್ತು.ಕೋವಿಡ್–19 ಪಿಡುಗಿನ ಕಾರಣದಿಂದ ಈ ಬಾರಿ ಕೇವಲ 4 ಸಾವಿರ ಗಣ್ಯರಿಗೆ ಆಹ್ವಾನ ನೀಡಲಾಗಿತ್ತು. ಕಾರ್ಯಕ್ರಮದಲ್ಲಿ ಹಾಜರಿದ್ದವರೆಲ್ಲರೂ ಮುಖಗವಸು ಧರಿಸಿ, ಪರಸ್ಪರ ಆರು ಅಡಿ ಅಂತರದಲ್ಲಿ ಕುಳಿತಿದ್ದರು. ಪ್ರತಿ ಕುರ್ಚಿಯಲ್ಲೂ ಮುಖಗವಸು, ಸ್ಯಾನಿಟೈಸರ್, ಕೈಗವಸು ಇದ್ದ ಕಿಟ್ ಅನ್ನು ಇಡಲಾಗಿತ್ತು.ಎಂದಿಗಿಂತ ಕಡಿಮೆಯೇ ಗಣ್ಯರ ಪಟ್ಟಿ ಸಿದ್ಧಪಡಿಸಲಾಗಿತ್ತು. ಪಿಡುಗಿನ ಕಾರಣದಿಂದಾಗಿ ಆಹ್ವಾನಿಸಿದ್ದ ಗಣ್ಯರಲ್ಲೂ ಕೆಲವರು ಗೈರಾಗಿದ್ದರು.