<p><strong>ಕೊಚ್ಚಿ:</strong>ಇಲ್ಲಿನ ಪ್ರೌಢಶಾಲೆಯೊಂದರ 15 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಿರಣ್ ಕರುಣಾಕರನ್ (43) ಎಂಬ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದರು.</p>.<p>‘ಅಲ್ಲದೇ, ಶಿಕ್ಷಕನ ವಿರುದ್ಧ ನೀಡಿದ ದೂರನ್ನು ಹಿಂಪಡೆದುಕೊಳ್ಳಲು ಮನವೊಲಿಸಿದ ಹಾಗೂ ಆರೋಪಿಯು ಊರಿನಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಪ್ರೌಢಶಾಲೆಯ ಪ್ರಾಂಶುಪಾಲ ಹಾಗೂ ಇತರ ಇಬ್ಬರು ಶಿಕ್ಷಕರನನ್ನೂ ಬಂಧಿಸಲಾಗಿದೆ’ ಎಂದೂ ಅವರು ತಿಳಿಸಿದರು.</p>.<p>‘ಪ್ರೌಢಶಾಲೆಯ ಅತಿಥಿ ಶಿಕ್ಷಕನಾಗಿದ್ದ ಕಿರಣನನ್ನು ತಮಿಳುನಾಡಿದ ನಾಗರಕೋಯಿಲ್ನಲ್ಲಿ ಬಂಧಿಸಲಾಗಿದೆ. ನಾಲ್ಕೂ ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆಯ ವಿವಿಧ ನಿಬಂಧನೆಗಳಡಿ ಪ್ರಕರಣ ದಾಖಲಿಸಲಾಗಿದೆ’ ಎಂದರು.</p>.<p>ಈ ಘಟನೆಯು ನವೆಂಬರ್ 16ರಂದು ನಡೆದಿದೆ. ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಬಳಿಕ ಆರೋಪಿಯು ವಿದ್ಯಾರ್ಥಿನಿಯನ್ನು ಆಕೆಯ ಮನೆಗೆ ಬಿಡುವುದಾಗಿ ಹೇಳಿ ತನ್ನ ಬೈಕ್ನಲ್ಲಿ ಕರೆದೊಯ್ದಿದ್ದಾನೆ. ಮಾರ್ಗಮಧ್ಯೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ವಿದ್ಯಾರ್ಥಿನಿಯು ತನ್ನ ಸ್ನೇಹಿತೆಯರಿಗೆ ಈ ವಿಷಯ ತಿಳಿಸಿದಾಗ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong>ಇಲ್ಲಿನ ಪ್ರೌಢಶಾಲೆಯೊಂದರ 15 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಿರಣ್ ಕರುಣಾಕರನ್ (43) ಎಂಬ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದರು.</p>.<p>‘ಅಲ್ಲದೇ, ಶಿಕ್ಷಕನ ವಿರುದ್ಧ ನೀಡಿದ ದೂರನ್ನು ಹಿಂಪಡೆದುಕೊಳ್ಳಲು ಮನವೊಲಿಸಿದ ಹಾಗೂ ಆರೋಪಿಯು ಊರಿನಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಪ್ರೌಢಶಾಲೆಯ ಪ್ರಾಂಶುಪಾಲ ಹಾಗೂ ಇತರ ಇಬ್ಬರು ಶಿಕ್ಷಕರನನ್ನೂ ಬಂಧಿಸಲಾಗಿದೆ’ ಎಂದೂ ಅವರು ತಿಳಿಸಿದರು.</p>.<p>‘ಪ್ರೌಢಶಾಲೆಯ ಅತಿಥಿ ಶಿಕ್ಷಕನಾಗಿದ್ದ ಕಿರಣನನ್ನು ತಮಿಳುನಾಡಿದ ನಾಗರಕೋಯಿಲ್ನಲ್ಲಿ ಬಂಧಿಸಲಾಗಿದೆ. ನಾಲ್ಕೂ ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆಯ ವಿವಿಧ ನಿಬಂಧನೆಗಳಡಿ ಪ್ರಕರಣ ದಾಖಲಿಸಲಾಗಿದೆ’ ಎಂದರು.</p>.<p>ಈ ಘಟನೆಯು ನವೆಂಬರ್ 16ರಂದು ನಡೆದಿದೆ. ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಬಳಿಕ ಆರೋಪಿಯು ವಿದ್ಯಾರ್ಥಿನಿಯನ್ನು ಆಕೆಯ ಮನೆಗೆ ಬಿಡುವುದಾಗಿ ಹೇಳಿ ತನ್ನ ಬೈಕ್ನಲ್ಲಿ ಕರೆದೊಯ್ದಿದ್ದಾನೆ. ಮಾರ್ಗಮಧ್ಯೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ವಿದ್ಯಾರ್ಥಿನಿಯು ತನ್ನ ಸ್ನೇಹಿತೆಯರಿಗೆ ಈ ವಿಷಯ ತಿಳಿಸಿದಾಗ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>