ತರಗತಿಗಳ ಬಾಗಿಲು ಮತ್ತು ಕಿಟಕಿಗಳನ್ನು ತೆರೆದಿಡಲು ಶಾಲಾ ಆಡಳಿತ ಮಂಡಳಿಗೆ ಸೂಚಿಸಿದ ಠಾಕ್ರೆ ಅವರು, ಶುದ್ಧ ಗಾಳಿ ಮತ್ತು ಪ್ರಕೃತಿಗೆ ಹತ್ತಿರವಾಗೋಣ ಎಂದು ಗುರುದೇವ ರವೀಂದ್ರನಾಥ ಠಾಗೋರ್ ಅವರ ಶಾಂತಿನಿಕೇತನದ ಉದಾಹರಣೆ ನೀಡಿದರು. ‘ನಾವು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ದೈಹಿಕ ಅಂತರವನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು’ ಎಂದೂ ಸಲಹೆ ನೀಡಿದ್ದಾರೆ.