<p><strong>ಡೆಹ್ರಾಡೂನ್: </strong>ಉತ್ತರಾಖಂಡದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸೋಮವಾರ ರಾಜ್ಯದ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪರ್ವತಾರೋಹಣ, ಶಿಬಿರ ಮತ್ತು ಚಾರಣದಂಥ ಚಟುವಟಿಕೆಗಳನ್ನು ಮಂಗಳವಾರದವರೆಗೆ ನಿಷೇಧಿಸಲಾಗಿದೆ.</p>.<p>ರಾಜ್ಯದ 13 ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಡಳಿತಗಳು ಈ ಆದೇಶ ಹೊರಡಿಸಿವೆ. ಅದರಂತೆ 13 ಜಿಲ್ಲೆಗಳಲ್ಲಿಯ ಶಾಲೆ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳು ತೆರೆದಿರುವುದಿಲ್ಲ.</p>.<p>ಇಂದು ಭಾರಿ ಮಳೆಯಾಗುವ ಮುನ್ಸೂಚನೆಯಿಂದಾಗಿ 'ರೆಡ್ ಅಲರ್ಟ್' ಘೋಷಣೆಯಾಗಿದೆ ಹಾಗೂ ಮಂಗಳವಾರಕ್ಕೆ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ತಗ್ಗಲಿದ್ದು, ಹವಾಮಾನ ಇಲಾಖೆಯು 'ಆರೆಂಜ್ ಅಲರ್ಟ್' ಘೋಷಿಸಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/flood-landslide-death-toll-rises-to-22-876408.html" itemprop="url">ಪ್ರವಾಹ –ಭೂಕುಸಿತ: ಮೃತರ ಸಂಖ್ಯೆ 22ಕ್ಕೆ ಏರಿಕೆ </a></p>.<p>ಅ.19ರ ವರೆಗೆ ಚಮೋಲಿ ಜಿಲ್ಲೆಯ ನಂದಾದೇವಿ ರಾಷ್ಟ್ರೀಯ ಉದ್ಯಾನ ಮತ್ತು ಗೋಪೇಶ್ವರದ ಸಂಪೂರ್ಣ ಅರಣ್ಯ ಪ್ರದೇಶದಲ್ಲಿ ಚಾರಣ, ಪರ್ವಾತಾರೋಹಣದಂಥ ಚಟುವಟಿಕೆಯನ್ನು ಜಿಲ್ಲಾಡಳಿತ ನಿಷೇಧಿಸಿದೆ.</p>.<p>ಡೆಹ್ರಾಡೂನ್ನಲ್ಲಿ ಇದೇ 18, 19ರಂದು ನಡೆಯಬೇಕಿದ್ದ ಜಿಲ್ಲಾಮಟ್ಟದ ಖೇಲ್ ಮಹಾಕುಂಭವನ್ನು ಅ.24 ಮತ್ತು 25ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್: </strong>ಉತ್ತರಾಖಂಡದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸೋಮವಾರ ರಾಜ್ಯದ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪರ್ವತಾರೋಹಣ, ಶಿಬಿರ ಮತ್ತು ಚಾರಣದಂಥ ಚಟುವಟಿಕೆಗಳನ್ನು ಮಂಗಳವಾರದವರೆಗೆ ನಿಷೇಧಿಸಲಾಗಿದೆ.</p>.<p>ರಾಜ್ಯದ 13 ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಡಳಿತಗಳು ಈ ಆದೇಶ ಹೊರಡಿಸಿವೆ. ಅದರಂತೆ 13 ಜಿಲ್ಲೆಗಳಲ್ಲಿಯ ಶಾಲೆ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳು ತೆರೆದಿರುವುದಿಲ್ಲ.</p>.<p>ಇಂದು ಭಾರಿ ಮಳೆಯಾಗುವ ಮುನ್ಸೂಚನೆಯಿಂದಾಗಿ 'ರೆಡ್ ಅಲರ್ಟ್' ಘೋಷಣೆಯಾಗಿದೆ ಹಾಗೂ ಮಂಗಳವಾರಕ್ಕೆ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ತಗ್ಗಲಿದ್ದು, ಹವಾಮಾನ ಇಲಾಖೆಯು 'ಆರೆಂಜ್ ಅಲರ್ಟ್' ಘೋಷಿಸಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/flood-landslide-death-toll-rises-to-22-876408.html" itemprop="url">ಪ್ರವಾಹ –ಭೂಕುಸಿತ: ಮೃತರ ಸಂಖ್ಯೆ 22ಕ್ಕೆ ಏರಿಕೆ </a></p>.<p>ಅ.19ರ ವರೆಗೆ ಚಮೋಲಿ ಜಿಲ್ಲೆಯ ನಂದಾದೇವಿ ರಾಷ್ಟ್ರೀಯ ಉದ್ಯಾನ ಮತ್ತು ಗೋಪೇಶ್ವರದ ಸಂಪೂರ್ಣ ಅರಣ್ಯ ಪ್ರದೇಶದಲ್ಲಿ ಚಾರಣ, ಪರ್ವಾತಾರೋಹಣದಂಥ ಚಟುವಟಿಕೆಯನ್ನು ಜಿಲ್ಲಾಡಳಿತ ನಿಷೇಧಿಸಿದೆ.</p>.<p>ಡೆಹ್ರಾಡೂನ್ನಲ್ಲಿ ಇದೇ 18, 19ರಂದು ನಡೆಯಬೇಕಿದ್ದ ಜಿಲ್ಲಾಮಟ್ಟದ ಖೇಲ್ ಮಹಾಕುಂಭವನ್ನು ಅ.24 ಮತ್ತು 25ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>