ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧ್ಯಾ ಹೆದರಿ ಬಿಜೆಪಿ ಸೇರಿದರು: ರಾಹುಲ್‌ ಟೀಕೆ

Last Updated 17 ಜುಲೈ 2021, 14:35 IST
ಅಕ್ಷರ ಗಾತ್ರ

ನವದೆಹಲಿ: ‘ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಮನೆ ಮತ್ತು ಅರಮನೆಯನ್ನು ಕಳೆದುಕೊಳ್ಳುವ ಭೀತಿಯಿಂದಾಗಿ ಆರ್‌ಎಸ್‌ಎಸ್‌– ಬಿಜೆಪಿ ಸೇರಿದರು’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

ಆನ್‌ಲೈನ್ ಕಾರ್ಯಕ್ರಮವೊಂದರಲ್ಲಿ ಪಕ್ಷದ 3000ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಕಾರ್ಯಕರ್ತರನ್ನುದ್ದೇಶಿಸಿ ರಾಹುಲ್‌ ಮಾತನಾಡಿದರು.

ಪಕ್ಷದಲ್ಲಿ ತಮ್ಮ ಒಂದು ಕಾಲದ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರನ್ನು ಉಲ್ಲೇಖಿಸಿದ ರಾಹುಲ್‌, ಮಧ್ಯಪ್ರದೇಶದಲ್ಲಿ ಕಳೆದ ವರ್ಷ ಕಾಂಗ್ರೆಸ್ ತೊರೆದು ಸಿಂಧಿಯಾ ಬಿಜೆಪಿ ಸೇರಿದರು. ಈಗ ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ನಾಗರಿಕ ವಿಮಾನಯಾನ ಸಚಿವರು. ಆರ್‌ಎಸ್‌ಎಸ್‌ ಭಯವಿರುವವರು ಪಕ್ಷ ತ್ಯಜಿಸಲು ಸ್ವತಂತ್ರರಿದ್ದಾರೆ. ಹಾಗೆಯೇ ಸಂಘಪರಿವಾರದ ವಿರುದ್ಧ ಧೈರ್ಯವಾಗಿ ಹೋರಾಡುವ ಹೊರಗಿನ ನಿರ್ಭೀತ ನಾಯಕರನ್ನು ಪಕ್ಷ ಸೇರಿಸಿಕೊಳ್ಳಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT