<p class="title"><strong>ಲಖನೌ:</strong>ಭೂ ವಿವಾದಕ್ಕೆ ಸಂಬಂಧಿಸಿದಂತೆ, ಪತ್ರಕರ್ತರೊಬ್ಬರ ಮಗಳನ್ನು ಸಜೀವ ದಹನ ಮಾಡಿರುವ ಘಟನೆ ಉತ್ತರ ಪ್ರದೇಶದ ಸುಲ್ತಾನಪುರ ಜಿಲ್ಲೆಯಲ್ಲಿ ನಡೆದಿದೆ.</p>.<p class="title">ಮನೆಯ ಸಮೀಪವೇ ಇರುವ ಕೊಳವೆ ಬಾವಿಯಲ್ಲಿ ನೀರು ತೆಗೆದುಕೊಳ್ಳಲು ಬಂದ ಸಂದರ್ಭದಲ್ಲಿ,ಮೂವರು ವ್ಯಕ್ತಿಗಳು ಯುವತಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.</p>.<p class="title">ತೀವ್ರವಾಗಿ ಗಾಯಗೊಂಡಿದ್ದ ಯುವತಿಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಸಾಯುವ ಮೊದಲು ಆರೋಪಿಗಳ ಹೆಸರನ್ನು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p class="title">ಹಿಂದಿ ದಿನಪತ್ರಿಕೆಯೊಂದರ ಉದ್ಯೋಗಿಯಾಗಿದ್ದ ಸಂತ್ರಸ್ತೆಯ ತಂದೆ ಪ್ರದೀಪ್ ಸಿಂಗ್ ಮತ್ತು ಗ್ರಾಮದ ಕುನ್ವರ್ ಸಿಂಗ್ ಎಂಬುವವರ ನಡುವೆ ಜಮೀನಿಗೆ ಸಂಬಂಧಿಸಿದಂತೆ ಜಗಳ ನಡೆದಿತ್ತು. ಇತ್ತೀಚೆಗೆ ಕುನ್ವರ್ ಸಿಂಗ್ ಅವರನ್ನು ಬಂದೂಕಿನಿಂದ ಪ್ರದೀಪ್ ಸಿಂಗ್ ಹತ್ಯೆ ಮಾಡಿದ್ದರು. ಅವರೀಗ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.</p>.<p class="title">ಘರ್ಷಣೆಯಲ್ಲಿ ಪ್ರದೀಪ್ ಕೂಡ ಗಾಯಗೊಂಡಿದ್ದರು. ಈ ಸಂಬಂಧ ಎಫ್ಐಆರ್ ದಾಖಲಿಸಿದ್ದರೂ, ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ:</strong>ಭೂ ವಿವಾದಕ್ಕೆ ಸಂಬಂಧಿಸಿದಂತೆ, ಪತ್ರಕರ್ತರೊಬ್ಬರ ಮಗಳನ್ನು ಸಜೀವ ದಹನ ಮಾಡಿರುವ ಘಟನೆ ಉತ್ತರ ಪ್ರದೇಶದ ಸುಲ್ತಾನಪುರ ಜಿಲ್ಲೆಯಲ್ಲಿ ನಡೆದಿದೆ.</p>.<p class="title">ಮನೆಯ ಸಮೀಪವೇ ಇರುವ ಕೊಳವೆ ಬಾವಿಯಲ್ಲಿ ನೀರು ತೆಗೆದುಕೊಳ್ಳಲು ಬಂದ ಸಂದರ್ಭದಲ್ಲಿ,ಮೂವರು ವ್ಯಕ್ತಿಗಳು ಯುವತಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.</p>.<p class="title">ತೀವ್ರವಾಗಿ ಗಾಯಗೊಂಡಿದ್ದ ಯುವತಿಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಸಾಯುವ ಮೊದಲು ಆರೋಪಿಗಳ ಹೆಸರನ್ನು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p class="title">ಹಿಂದಿ ದಿನಪತ್ರಿಕೆಯೊಂದರ ಉದ್ಯೋಗಿಯಾಗಿದ್ದ ಸಂತ್ರಸ್ತೆಯ ತಂದೆ ಪ್ರದೀಪ್ ಸಿಂಗ್ ಮತ್ತು ಗ್ರಾಮದ ಕುನ್ವರ್ ಸಿಂಗ್ ಎಂಬುವವರ ನಡುವೆ ಜಮೀನಿಗೆ ಸಂಬಂಧಿಸಿದಂತೆ ಜಗಳ ನಡೆದಿತ್ತು. ಇತ್ತೀಚೆಗೆ ಕುನ್ವರ್ ಸಿಂಗ್ ಅವರನ್ನು ಬಂದೂಕಿನಿಂದ ಪ್ರದೀಪ್ ಸಿಂಗ್ ಹತ್ಯೆ ಮಾಡಿದ್ದರು. ಅವರೀಗ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.</p>.<p class="title">ಘರ್ಷಣೆಯಲ್ಲಿ ಪ್ರದೀಪ್ ಕೂಡ ಗಾಯಗೊಂಡಿದ್ದರು. ಈ ಸಂಬಂಧ ಎಫ್ಐಆರ್ ದಾಖಲಿಸಿದ್ದರೂ, ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>