<p><strong>ಹೈದರಾಬಾದ್</strong>:ಕಳೆದ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ತತ್ತರಿಸಿದ್ದ ಮುತ್ತಿನ ನಗರಿ ಹೈದರಾಬಾದ್ನಲ್ಲಿ ಶನಿವಾರ ಸಂಜೆಯಿಂದ ಭಾರಿ ಮಳೆ ಸುರಿದಿದೆ. ಹೀಗಾಗಿ, ನಗರದ ಹಲವು ಪ್ರದೇಶಗಳಲ್ಲಿ ಭಾನುವಾರಪರಿಣಾಮ ಎರಡನೇ ಬಾರಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.</p>.<p>ನಗರದ ಮಂಗಳಹಾತ್ ಪ್ರದೇಶದಲ್ಲಿ ಗೋಡೆ ಕುಸಿತ ಪರಿಣಾಮ ಒಬ್ಬ ಬಾಲಕಿ ಮೃತಪಟ್ಟಿದ್ದಾಳೆ.ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ಹಾನಿಗೊಳಗಾಗಿದ್ದ ಪ್ರದೇಶಗಳಲ್ಲಿಯೇ ಈಗ ಮತ್ತೆ ನೀರು ನಿಂತಿದೆ. ನಗರದ ತಗ್ಗು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಅ. 21ರ ವರೆಗೆ ನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p>ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್, ವಿಪತ್ತು ನಿರ್ವಹಣಾ ಕಾರ್ಯಪಡೆ ಸಿಬ್ಬಂದಿಯಲ್ಲದೇ ಪೊಲೀಸರು ಸಹ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ನೀರು ನಿಂತಿರುವ ಪ್ರದೇಶಗಳಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುವ ಕಾರ್ಯ ಶನಿವಾರದಿಂದಲೇ ಆರಂಭಗೊಂಡಿದೆ.</p>.<p>ಅಪಾರ್ಟ್ಮೆಂಟ್ಗಳ ನೆಲಮಹಡಿಯಲ್ಲಿ ಮೊಣಕಾಲುವರೆಗೆ ನೀರು ನಿಂತಿದ್ದು, ವಾಹನಗಳ ನಿಲುಗಡೆಗೂ ತೊಂದರೆಯಾಗಿದೆ. ಮಳೆ ನೀರಿನ ರಭಸಕ್ಕೆ ಆಟೊಗಳು ತೇಲಿ ಹೋಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.</p>.<p>ಸರೂರ್ನಗರದಲ್ಲಿ ಗರಿಷ್ಠ 16.9 ಸೆಂ.ಮಿ. ಮಳೆ ಬಿದ್ದಿದ್ದರೆ, ಹೈದರಾಬಾದ್ ವಿಮಾನನಿಲ್ದಾಣದಲ್ಲಿ 7.2 ಸೆಂ.ಮೀ. ಬಿದ್ದಿದೆ.</p>.<p>‘ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿಯಿಂದ ನಲುಗಿರುವ ನಗರದ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲಾಗುತ್ತಿದೆ’ ಎಂದು ಪಾಲಿಕೆ ಆಯುಕ್ತ ಡಿ.ಎಸ್.ಲೋಕೇಶ್ಕುಮಾರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>:ಕಳೆದ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ತತ್ತರಿಸಿದ್ದ ಮುತ್ತಿನ ನಗರಿ ಹೈದರಾಬಾದ್ನಲ್ಲಿ ಶನಿವಾರ ಸಂಜೆಯಿಂದ ಭಾರಿ ಮಳೆ ಸುರಿದಿದೆ. ಹೀಗಾಗಿ, ನಗರದ ಹಲವು ಪ್ರದೇಶಗಳಲ್ಲಿ ಭಾನುವಾರಪರಿಣಾಮ ಎರಡನೇ ಬಾರಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.</p>.<p>ನಗರದ ಮಂಗಳಹಾತ್ ಪ್ರದೇಶದಲ್ಲಿ ಗೋಡೆ ಕುಸಿತ ಪರಿಣಾಮ ಒಬ್ಬ ಬಾಲಕಿ ಮೃತಪಟ್ಟಿದ್ದಾಳೆ.ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ಹಾನಿಗೊಳಗಾಗಿದ್ದ ಪ್ರದೇಶಗಳಲ್ಲಿಯೇ ಈಗ ಮತ್ತೆ ನೀರು ನಿಂತಿದೆ. ನಗರದ ತಗ್ಗು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಅ. 21ರ ವರೆಗೆ ನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p>ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್, ವಿಪತ್ತು ನಿರ್ವಹಣಾ ಕಾರ್ಯಪಡೆ ಸಿಬ್ಬಂದಿಯಲ್ಲದೇ ಪೊಲೀಸರು ಸಹ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ನೀರು ನಿಂತಿರುವ ಪ್ರದೇಶಗಳಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುವ ಕಾರ್ಯ ಶನಿವಾರದಿಂದಲೇ ಆರಂಭಗೊಂಡಿದೆ.</p>.<p>ಅಪಾರ್ಟ್ಮೆಂಟ್ಗಳ ನೆಲಮಹಡಿಯಲ್ಲಿ ಮೊಣಕಾಲುವರೆಗೆ ನೀರು ನಿಂತಿದ್ದು, ವಾಹನಗಳ ನಿಲುಗಡೆಗೂ ತೊಂದರೆಯಾಗಿದೆ. ಮಳೆ ನೀರಿನ ರಭಸಕ್ಕೆ ಆಟೊಗಳು ತೇಲಿ ಹೋಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.</p>.<p>ಸರೂರ್ನಗರದಲ್ಲಿ ಗರಿಷ್ಠ 16.9 ಸೆಂ.ಮಿ. ಮಳೆ ಬಿದ್ದಿದ್ದರೆ, ಹೈದರಾಬಾದ್ ವಿಮಾನನಿಲ್ದಾಣದಲ್ಲಿ 7.2 ಸೆಂ.ಮೀ. ಬಿದ್ದಿದೆ.</p>.<p>‘ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿಯಿಂದ ನಲುಗಿರುವ ನಗರದ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲಾಗುತ್ತಿದೆ’ ಎಂದು ಪಾಲಿಕೆ ಆಯುಕ್ತ ಡಿ.ಎಸ್.ಲೋಕೇಶ್ಕುಮಾರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>