ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್ನ ಭೋಯಿಗುಡದಲ್ಲಿರುವ ಗುಜರಿ ವಸ್ತುಗಳ ಗೋಡೌನ್ನಲ್ಲಿ ಬುಧವಾರ ನಸುಕಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಬಿಹಾರ ಮೂಲದ 11 ವಲಸೆ ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಕಾರ್ಮಿಕರ ದೇಹಗಳು ಗುರುತು ಹಿಡಿಯಲಾಗದಷ್ಟು ಪ್ರಮಾಣದಲ್ಲಿ ಸುಟ್ಟಿದ್ದು, ಡಿಎನ್ಎ ಪರೀಕ್ಷೆಯಿಂದ ಮಾತ್ರವೇ ಸಂತ್ರಸ್ತರ ಗುರುತು ಪತ್ತೆ ಸಾಧ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.