<p><strong>ಗಯಾ/ಪಟ್ನಾ</strong>: ‘ಕೋವಿಡ್–19 ಪಿಡುಗಿನ ನಡುವೆಯೂ ರಾಜ್ಯದ ಅಭಿವೃದ್ಧಿ, ಜನರ ಸುರಕ್ಷತೆಗೆಮುಖ್ಯಮಂತ್ರಿ ನಿತೀಶ್ಕುಮಾರ್ ನೇತೃತ್ವದ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ರಾಜ್ಯದ ಜನತೆ ಅವರ ನಾಯಕತ್ವವನ್ನು ಭದ್ರಪಡಿಸಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಹೇಳಿದರು.</p>.<p>ಗಯಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ದೇಶದ ನಾಯಕತ್ವ ಪ್ರಧಾನಿ ನರೇಂದ್ರ ಮೋದಿ ಅವರ ಕೈಯಲ್ಲಿ ಸುರಕ್ಷಿತವಾಗಿದೆ. ಅದೇ ರೀತಿ ಬಿಹಾರದ ನಾಯಕತ್ವ ನಿತೀಶ್ಕುಮಾರ್ ಅವರ ಕೈಯಲ್ಲಿ ಭದ್ರವಾಗಿರುವುದು ಮುಖ್ಯ‘ ಎಂದರು.</p>.<p>‘ಕೋವಿಡ್–19 ಪಿಡುಗಿನಿಂದ ಜನರು ತತ್ತರಿಸಿದರು. ಆದರೆ, ಅವರು ರಾಜ್ಯದ ಜನರ ಸುರಕ್ಷತೆಗೆ ಒತ್ತು ನೀಡಿದರು. ಇತರ ರಾಜ್ಯಗಳಲ್ಲಿ ಸಿಲುಕಿದ್ದ ಬಿಹಾರದ ಜನರಿಗೂ ಹಣಕಾಸಿನ ನೆರವು ನೀಡಿದರು’ ಎಂದು ನಡ್ಡಾ ಹೇಳಿದರು.</p>.<p>‘ರಾಜ್ಯದಲ್ಲಿ ಈ ಮೊದಲು ನಾಲ್ಕು ವೈದ್ಯಕೀಯ ಕಾಲೇಜುಗಳಿದ್ದವು. ಕಳೆದ ಆರು ವರ್ಷಗಳ ಅವಧಿಯಲ್ಲಿ ಬಿಹಾರಕ್ಕೆ 14 ವೈದ್ಯಕೀಯ ಕಾಲೇಜುಗಳನ್ನು ನೀಡಲಾಗಿದ್ದು, ಇನ್ನೂ 11 ಕಾಲೇಜುಗಳಿಗೆ ಮಂಜೂರಾತಿ ನೀಡುವ ಪ್ರಕ್ರಿಯೆ ನಡೆಯುತ್ತಿದೆ’ ಎಂದರು.</p>.<p><strong>ಪಟ್ನಾಕ್ಕೆ ಭೇಟಿ:</strong> ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿರುವ ನಡ್ಡಾ, ವಿಶೇಷ ವಿಮಾನದಲ್ಲಿ ಪಟ್ನಾದ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಅವರಿಗೆ ಪಕ್ಷದ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.</p>.<p>ಇಲ್ಲಿನ ಪ್ರಸಿದ್ಧ ಹನುಮಾನ್ ಮಂದಿರಕ್ಕೆ ತೆರಳಿ, ಪೂಜೆ ಸಲ್ಲಿಸಿದರು. ನಂತರ, ಜಯಪ್ರಕಾಶ್ ನಾರಾಯಣ ಅವರು ವಾಸವಿದ್ದ ಮನೆ ‘ಕದಮ್ಕುಂಆ’ ಕ್ಕೆ ಭೇಟಿ ನೀಡಿದರು. ಜೆಪಿ ಅವರ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ಜೆಪಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಯಾ/ಪಟ್ನಾ</strong>: ‘ಕೋವಿಡ್–19 ಪಿಡುಗಿನ ನಡುವೆಯೂ ರಾಜ್ಯದ ಅಭಿವೃದ್ಧಿ, ಜನರ ಸುರಕ್ಷತೆಗೆಮುಖ್ಯಮಂತ್ರಿ ನಿತೀಶ್ಕುಮಾರ್ ನೇತೃತ್ವದ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ರಾಜ್ಯದ ಜನತೆ ಅವರ ನಾಯಕತ್ವವನ್ನು ಭದ್ರಪಡಿಸಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಹೇಳಿದರು.</p>.<p>ಗಯಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ದೇಶದ ನಾಯಕತ್ವ ಪ್ರಧಾನಿ ನರೇಂದ್ರ ಮೋದಿ ಅವರ ಕೈಯಲ್ಲಿ ಸುರಕ್ಷಿತವಾಗಿದೆ. ಅದೇ ರೀತಿ ಬಿಹಾರದ ನಾಯಕತ್ವ ನಿತೀಶ್ಕುಮಾರ್ ಅವರ ಕೈಯಲ್ಲಿ ಭದ್ರವಾಗಿರುವುದು ಮುಖ್ಯ‘ ಎಂದರು.</p>.<p>‘ಕೋವಿಡ್–19 ಪಿಡುಗಿನಿಂದ ಜನರು ತತ್ತರಿಸಿದರು. ಆದರೆ, ಅವರು ರಾಜ್ಯದ ಜನರ ಸುರಕ್ಷತೆಗೆ ಒತ್ತು ನೀಡಿದರು. ಇತರ ರಾಜ್ಯಗಳಲ್ಲಿ ಸಿಲುಕಿದ್ದ ಬಿಹಾರದ ಜನರಿಗೂ ಹಣಕಾಸಿನ ನೆರವು ನೀಡಿದರು’ ಎಂದು ನಡ್ಡಾ ಹೇಳಿದರು.</p>.<p>‘ರಾಜ್ಯದಲ್ಲಿ ಈ ಮೊದಲು ನಾಲ್ಕು ವೈದ್ಯಕೀಯ ಕಾಲೇಜುಗಳಿದ್ದವು. ಕಳೆದ ಆರು ವರ್ಷಗಳ ಅವಧಿಯಲ್ಲಿ ಬಿಹಾರಕ್ಕೆ 14 ವೈದ್ಯಕೀಯ ಕಾಲೇಜುಗಳನ್ನು ನೀಡಲಾಗಿದ್ದು, ಇನ್ನೂ 11 ಕಾಲೇಜುಗಳಿಗೆ ಮಂಜೂರಾತಿ ನೀಡುವ ಪ್ರಕ್ರಿಯೆ ನಡೆಯುತ್ತಿದೆ’ ಎಂದರು.</p>.<p><strong>ಪಟ್ನಾಕ್ಕೆ ಭೇಟಿ:</strong> ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿರುವ ನಡ್ಡಾ, ವಿಶೇಷ ವಿಮಾನದಲ್ಲಿ ಪಟ್ನಾದ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಅವರಿಗೆ ಪಕ್ಷದ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.</p>.<p>ಇಲ್ಲಿನ ಪ್ರಸಿದ್ಧ ಹನುಮಾನ್ ಮಂದಿರಕ್ಕೆ ತೆರಳಿ, ಪೂಜೆ ಸಲ್ಲಿಸಿದರು. ನಂತರ, ಜಯಪ್ರಕಾಶ್ ನಾರಾಯಣ ಅವರು ವಾಸವಿದ್ದ ಮನೆ ‘ಕದಮ್ಕುಂಆ’ ಕ್ಕೆ ಭೇಟಿ ನೀಡಿದರು. ಜೆಪಿ ಅವರ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ಜೆಪಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>