<p><strong>ನವದೆಹಲಿ:</strong> ಕಾಶ್ಮೀರ ಕಣಿವೆಯಲ್ಲಿ 38 ಪಾಕಿಸ್ತಾನಿ ಭಯೋತ್ಪಾದಕರು ಸಕ್ರಿಯವಾಗಿರುವುದನ್ನು ಭದ್ರತಾ ಪಡೆ ಗುರುತಿಸಿದೆ. ಅವರನ್ನು ಮಟ್ಟಹಾಕಲು ಶೀಘ್ರದಲ್ಲೇ ಸಂಘಟಿತ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿವೆ.</p>.<p>38 ಉಗ್ರರ ಪೈಕಿ 27 ಮಂದಿ ಲಷ್ಕರ್-ಎ-ತೈಬಾ (ಎಲ್ಇಟಿ)ಗೆ ಸೇರಿದವರಾಗಿದ್ದರೆ, 11 ಮಂದಿ ಜೈಶ್-ಎ ಮೊಹಮ್ಮದ್ (ಜೆಇಎಂ) ಸಂಘನೆಗೆ ಸೇರಿದವರು. ಇವರೆಲ್ಲರ ಮೇಲೆ ಭದ್ರತಾ ಪಡೆ ತೀವ್ರ ನಿಗಾ ವಹಿಸಿದೆ ಎನ್ನಲಾಗಿದೆ.</p>.<p>ಶ್ರೀನಗರ, ಪುಲ್ವಾಮಾ, ಬಾರಾಮುಲ್ಲಾ ಮತ್ತು ಕುಲ್ಗಾಮ್ ಮತ್ತು ಕಣಿವೆಯ ಇತರ ಭಾಗಗಳಲ್ಲಿ ಈ ಉಗ್ರರು ಇದ್ದಾರೆ. ಇನ್ನೂ ಕೆಲ ಮಂದಿ ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ ಎಂದೂ ಗೊತ್ತಾಗಿದೆ.</p>.<p>ಅಕ್ಟೋಬರ್ನಲ್ಲಿ ಕಣಿವೆ ರಾಜ್ಯದಲ್ಲಿ ನಡೆದ ನಾಗರಿಕ ಹತ್ಯೆಗಳ ನಂತರ ರಚಿಸಲಾದ ವಿಶೇಷ ತಂಡವು ಉಗ್ರರ ನಿಖರ ಸ್ಥಳಗಳನ್ನು ಪತ್ತೆ ಮಾಡುತ್ತಿದೆ. ವಿಶೇಷ ತಂಡಕ್ಕೆ ಸಾಕಷ್ಟು ನೆರವನ್ನೂ ನೀಡಲಾಗುತ್ತಿದೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕೇಂದ್ರ ಪೊಲೀಸ್ ಏಜೆನ್ಸಿಗಳ ವಿಶೇಷ ಗುಂಪಿನಿಂದಾಗಿ ಉಗ್ರರ ಗುರುತಿಸುವಿಕೆ ಸಾಧ್ಯವಾಯಿತು. ಇದೀಗ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೋಲೀಸ್ರ ವಿಶೇಷ ಕಾರ್ಯಾಚರಣೆ ಗುಂಪು (ಎಸ್ಒಜಿ) ಇತರ ಮಧ್ಯಸ್ಥಗಾರರೊಂದಿಗೆ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಹೊಸದಾಗಿ ರಚನೆಯಾಗಿರುವ ಉಗ್ರರ ನಿಗಾ ಪಡೆಯು (ಟಿಎಂಜಿ) ಕಣಿವೆಯಲ್ಲಿನ ಭಯೋತ್ಪಾದಕರನ್ನು ಮಟ್ಟಹಾಕುವಲ್ಲಿ ಪರಿಣಾಮಕಾರಿ ಹೆಜ್ಜೆಗಳನ್ನಿಟ್ಟಿದೆ.</p>.<p>ಒಳನುಸುಳುವಿಕೆಗಳ ಕುರಿತು ನಿಖರವಾದ ಮಾಹಿತಿ ಹೊಂದಿರುವ ಈ ಗುಂಪು, ಭಾರತದ ಗಡಿಯಲ್ಲಿ ಭಯೋತ್ಪಾದಕರ ವಿರುದ್ಧ ನಿರ್ಣಾಯಕ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುನ್ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಶ್ಮೀರ ಕಣಿವೆಯಲ್ಲಿ 38 ಪಾಕಿಸ್ತಾನಿ ಭಯೋತ್ಪಾದಕರು ಸಕ್ರಿಯವಾಗಿರುವುದನ್ನು ಭದ್ರತಾ ಪಡೆ ಗುರುತಿಸಿದೆ. ಅವರನ್ನು ಮಟ್ಟಹಾಕಲು ಶೀಘ್ರದಲ್ಲೇ ಸಂಘಟಿತ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿವೆ.</p>.<p>38 ಉಗ್ರರ ಪೈಕಿ 27 ಮಂದಿ ಲಷ್ಕರ್-ಎ-ತೈಬಾ (ಎಲ್ಇಟಿ)ಗೆ ಸೇರಿದವರಾಗಿದ್ದರೆ, 11 ಮಂದಿ ಜೈಶ್-ಎ ಮೊಹಮ್ಮದ್ (ಜೆಇಎಂ) ಸಂಘನೆಗೆ ಸೇರಿದವರು. ಇವರೆಲ್ಲರ ಮೇಲೆ ಭದ್ರತಾ ಪಡೆ ತೀವ್ರ ನಿಗಾ ವಹಿಸಿದೆ ಎನ್ನಲಾಗಿದೆ.</p>.<p>ಶ್ರೀನಗರ, ಪುಲ್ವಾಮಾ, ಬಾರಾಮುಲ್ಲಾ ಮತ್ತು ಕುಲ್ಗಾಮ್ ಮತ್ತು ಕಣಿವೆಯ ಇತರ ಭಾಗಗಳಲ್ಲಿ ಈ ಉಗ್ರರು ಇದ್ದಾರೆ. ಇನ್ನೂ ಕೆಲ ಮಂದಿ ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ ಎಂದೂ ಗೊತ್ತಾಗಿದೆ.</p>.<p>ಅಕ್ಟೋಬರ್ನಲ್ಲಿ ಕಣಿವೆ ರಾಜ್ಯದಲ್ಲಿ ನಡೆದ ನಾಗರಿಕ ಹತ್ಯೆಗಳ ನಂತರ ರಚಿಸಲಾದ ವಿಶೇಷ ತಂಡವು ಉಗ್ರರ ನಿಖರ ಸ್ಥಳಗಳನ್ನು ಪತ್ತೆ ಮಾಡುತ್ತಿದೆ. ವಿಶೇಷ ತಂಡಕ್ಕೆ ಸಾಕಷ್ಟು ನೆರವನ್ನೂ ನೀಡಲಾಗುತ್ತಿದೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕೇಂದ್ರ ಪೊಲೀಸ್ ಏಜೆನ್ಸಿಗಳ ವಿಶೇಷ ಗುಂಪಿನಿಂದಾಗಿ ಉಗ್ರರ ಗುರುತಿಸುವಿಕೆ ಸಾಧ್ಯವಾಯಿತು. ಇದೀಗ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೋಲೀಸ್ರ ವಿಶೇಷ ಕಾರ್ಯಾಚರಣೆ ಗುಂಪು (ಎಸ್ಒಜಿ) ಇತರ ಮಧ್ಯಸ್ಥಗಾರರೊಂದಿಗೆ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಹೊಸದಾಗಿ ರಚನೆಯಾಗಿರುವ ಉಗ್ರರ ನಿಗಾ ಪಡೆಯು (ಟಿಎಂಜಿ) ಕಣಿವೆಯಲ್ಲಿನ ಭಯೋತ್ಪಾದಕರನ್ನು ಮಟ್ಟಹಾಕುವಲ್ಲಿ ಪರಿಣಾಮಕಾರಿ ಹೆಜ್ಜೆಗಳನ್ನಿಟ್ಟಿದೆ.</p>.<p>ಒಳನುಸುಳುವಿಕೆಗಳ ಕುರಿತು ನಿಖರವಾದ ಮಾಹಿತಿ ಹೊಂದಿರುವ ಈ ಗುಂಪು, ಭಾರತದ ಗಡಿಯಲ್ಲಿ ಭಯೋತ್ಪಾದಕರ ವಿರುದ್ಧ ನಿರ್ಣಾಯಕ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುನ್ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>