ಗಡಿ ಭದ್ರತಾ ಪಡೆಗಳಾದ ಬಿಎಸ್ಎಫ್, ಎಸ್ಎಸ್ಬಿ, ರಾಜ್ಯ ಪೊಲೀಸ್ ಪಡೆಗಳು, ಭಯೋತ್ಪಾದನೆ ನಿಗ್ರಹ ಕಾರ್ಯದಲ್ಲಿ ತೊಡಗಿರುವ ಸಿಆರ್ಪಿಎಫ್ ಮತ್ತು ಜಮ್ಮು–ಕಾಶ್ಮೀರ ಪೊಲೀಸರಿಗೆ ಗಡಿ ನಿರ್ವಹಣೆಯ ಕಾರ್ಯವಿಧಾನವನ್ನು ಬದಲಿಸಿಕೊಳ್ಳಲು ಹೇಳಲಾಗಿದೆ. ಇದೇ ರೀತಿಯ ನಿರ್ದೇಶನವನ್ನು ಕೇಂದ್ರ ಮತ್ತು ರಾಜ್ಯ ಪೊಲೀಸ್ ಪಡೆಗಳಿಗೂ ನೀಡಲಾಗಿದೆ.