ಮೀರತ್: ಉತ್ತರ ಪ್ರದೇಶದ ಮೀರತ್ ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ರೈಲ್ವೆ ನಿಲ್ದಾಣಗಳು ಮತ್ತು ದೇವಾಲಯಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬಂದಿರುವ ಕಾರಣ, ಎಲ್ಲ ಕಡೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ನವೆಂಬರ್ 11 ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೀರತ್ಗೆ ಭೇಟಿ ನೀಡಲಿದ್ದಾರೆ. ಅದಕ್ಕೂ ಮೊದಲೇ ಈ ರೀತಿಯ ಪತ್ರವೊಂದು ಬಂದಿದೆ ಎಂದು ಮೀರತ್ ನಗರ ರೈಲ್ವೆ ನಿಲ್ದಾಣದ ಉಪ ಪೊಲೀಸ್ ವರಿಷ್ಠಾಧಿಕಾರಿ ಸುದೇಶ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.