ಪೊಲೀಸ್ ಮತ್ತು ಅರೆಸೇನಾಪಡೆಯ ಸಿಆರ್ಪಿಎಫ್ ಸೇರಿದಂತೆ ಹೆಚ್ಚುವರಿ ಪಡೆಗಳನ್ನು ಕೇಂದ್ರಾಡಳಿತ ಪ್ರದೇಶದಾದ್ಯಂತ ನಿಯೋಜಿಸಲಾಗಿದೆ. ಎರಡೂ ಪ್ರಮುಖ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಶ್ರೀನಗರ ಮತ್ತು ಕಾಶ್ಮೀರದ ಇತರ ಜಿಲ್ಲೆಗಳಲ್ಲಿ ಎಲ್ಲಾ ಸಿಸಿಟಿವಿಗಳನ್ನು ಕಾರ್ಯಗತಗೊಳಿಸಲಾಗಿದೆ ಮತ್ತು ಆಯಾ ಪೊಲೀಸ್ ನಿಯಂತ್ರಣ ಕೊಠಡಿಗಳಿಂದ ವಾಹನಗಳು, ಪಾದಚಾರಿಗಳ ಚಲನೆಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.