ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 28 ವರ್ಷ: ಅಯೋಧ್ಯೆಯಲ್ಲಿ ಬಿಗಿ ಭದ್ರತೆ

Last Updated 6 ಡಿಸೆಂಬರ್ 2020, 5:17 IST
ಅಕ್ಷರ ಗಾತ್ರ

ಅಯೋಧ್ಯೆ:ಬಾಬರಿ ಮಸೀದಿ ಧ್ವಂಸ ಪ್ರಕರಣವು 28 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಅಯೋಧ್ಯೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರತಿವರ್ಷ ಡಿಸೆಂಬರ್‌ 6ನ್ನು ಮಸೀದಿ ಧ್ವಂಸ ದಿನವೆಂದು ಆಚರಿಸಲಾಗುತ್ತದೆ.

ಈ ದಿನವನ್ನು ‘ಕಪ್ಪುದಿನ’ವೆಂದು ಪರಿಗಣಿಸಿರುವ ಮುಸ್ಲೀಮರು, 16ನೇ ಶತಮಾನದ ಮಸೀದಿಯನ್ನು ಪುನರ್‌ನಿರ್ಮಿಸುವಂತೆ ಕೋರಿ ರಾಷ್ಟ್ರಪತಿ ಹಾಗೂ ಪ್ರಧಾನಿ ಅವರಿಗೆ ಪತ್ರಗಳನ್ನು ಬರೆದಿದ್ದಾರೆ.

ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಹೋರಾಟ ನಡೆಸುತ್ತಿದ್ದರು. ಈ ವಿಚಾರವಾಗಿ 2019ರಲ್ಲಿ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌, ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಿಸುವಂತೆ ಹಾಗೂ ಮಸೀದಿಗೆ ಪರ್ಯಾಯ ಭೂಮಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT