ವಿವಿಧ ರೈತ ಸಂಘಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡರು, ‘ನಾವು ಚಕ್ಕಾ ಜಾಮ್ ಪ್ರತಿಭಟನೆಯ ಭಾಗವಾಗಿ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಖಂಡದಲ್ಲಿ ರಸ್ತೆಗಳನ್ನು ಬಂದ್ ಮಾಡುವುದಿಲ್ಲ‘ ಎಂದು ಹೇಳಿದ್ದಾರೆ. ಆದರೆ, ದೇಶದ ವಿವಿಧ ಭಾಗಗಳಲ್ಲಿ ರೈತರು ರಾಷ್ಟ್ರ ಮತ್ತು ರಾಜ್ಯ ಹೆದ್ದಾರಿಗಳನ್ನು ಮೂರು ಗಂಟೆಗಳ ಕಾಲ ಬಂದ್ ಮಾಡಿ, ಶಾಂತ ರೀತಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಶುಕ್ರವಾರ ತಿಳಿಸಿದ್ದರು.