<p><strong>ನವದೆಹಲಿ</strong>: ಧಾರ್ಮಿಕ ಮತ್ತು ದತ್ತಿ ಕೇಂದ್ರಗಳಿಗೆ ಏಕರೂಪ ಸಂಹಿತೆಗೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಸ್ವಾಮೀಜಿಯೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.</p>.<p>ದೇಶಾದ್ಯಂತ ಹಿಂದೂ ದೇವಾಲಯಗಳ ಮೇಲೆ ಅಧಿಕಾರಿಗಳ ನಿಯಂತ್ರಣವಿದೆ, ಇತರ ಕೆಲವು ಸಮುದಾಯಗಳ ಧಾರ್ಮಿಕ ಕೇಂದ್ರಗಳ ನಿರ್ವಹಣೆವನ್ನು ಸ್ವಯಂ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂಬುದನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಸ್ವಾಮಿ ಜೀತೇಂದ್ರಾನಂದ್ ಸರಸ್ವತಿ ಎಂಬವರು ಈ ಪಿಐಎಲ್ ಸಲ್ಲಿಸಿದ್ದು, ಹಿಂದೂಗಳು, ಜೈನರು, ಬೌದ್ಧರು ಮತ್ತು ಸಿಖ್ಖರು ತಮ್ಮ ಧಾರ್ಮಿಕ ಚರ-ಸ್ಥಿರ ಆಸ್ತಿಗಳನ್ನು ಹೊಂದಲು, ನಿರ್ವಹಿಸಲು ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಪಾರ್ಸಿಗಳ ರೀತಿಯೇ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಘೋಷಿಸಲು ನಿರ್ದೇಶನ ನೀಡಬೇಕೆಂದು ಕೋರಲಾಗಿದೆ.</p>.<p>ಹಿಂದೂಗಳು ಮತ್ತು ಸಿಖ್ಖರಂತಹ ಕೆಲವು ಧಾರ್ಮಿಕ ಪಂಗಡಗಳ ಧಾರ್ಮಿಕ ಸ್ಥಳಗಳನ್ನು ನಿಯಂತ್ರಿಸುವ ಮೂಲಕ ಧಾರ್ಮಿಕ ವ್ಯವಹಾರಗಳ ನಿರ್ವಹಣೆಯ ವಿಷಯದಲ್ಲಿ ರಾಜ್ಯಗಳು ತಾರತಮ್ಯ ಮಾಡುತ್ತಿವೆ ಎಂದು ಅರ್ಜಿದಾರರು ವಾದಿಸಿದ್ದಾರೆ.</p>.<p>ಕಲಂ 26-27ರ ಅನ್ವಯ ಧಾರ್ಮಿಕ ವ್ಯವಹಾರಗಳ ನಿರ್ವಹಣೆಯ ವಿಷಯದಲ್ಲಿ ಧರ್ಮಗಳ ನಡುವೆ ಯಾವುದೇ ತಾರತಮ್ಯ ಮಾಡುವಂತಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.</p>.<p>ರಾಜ್ಯಗಳು ಸಂವಿಧಾನಾತ್ಮಕವಾಗಿ ಸಮರ್ಥವಾಗಿಲ್ಲ ಅಥವಾ ಧಾರ್ಮಿಕ ವ್ಯವಹಾರಗಳ ನಿರ್ವಹಣೆಯನ್ನು ಮಾಡುವ ಸಾಮರ್ಥ್ಯ ಹೊಂದಿಲ್ಲ. ಧಾರ್ಮಿಕ ಆಚರಣೆಗಳು ಮತ್ತು ನಂಬಿಕೆಗಳು ವೈಯಕ್ತಿಕವಾದುದಾಗಿವೆ ಎಂದು ವಿವರಿಸಿದ್ದಾರೆ.</p>.<p>ವಕೀಲ ಸಂಜಯ್ ಕುಮಾರ್ ಪಾಠಕ್ ಮೂಲಕ ಸಲ್ಲಿಸಲಾದ ಮನವಿಯು 'ಧಾರ್ಮಿಕ ಮತ್ತು ದತ್ತಿ ಕೇಂದ್ರಗಳಿಗೆ ಏಕರೂಪ ಸಂಹಿತೆ' ರೂಪಿಸಲು ಕೇಂದ್ರ ಅಥವಾ ಭಾರತದ ಕಾನೂನು ಆಯೋಗಕ್ಕೆ ನಿರ್ದೇಶನ ನೀಡಲು ಕೋರಿದೆ.</p>.<p>ಈ ಹಿಂದೆ, ಇದೇ ರೀತಿ, ಧಾರ್ಮಿಕ ಮತ್ತು ದತ್ತಿಗಳಿಗೆ ಏಕರೂಪದ ಸಂಹಿತೆಯನ್ನು ಕೋರಿ ದೇಶದಾದ್ಯಂತ ಹಿಂದೂ ದೇವಾಲಯಗಳ ಮೇಲೆ ಅಧಿಕಾರಿಗಳ ನಿಯಂತ್ರಣವನ್ನು ಉಲ್ಲೇಖಿಸಿ ವಕೀಲ ಮತ್ತು ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಧಾರ್ಮಿಕ ಮತ್ತು ದತ್ತಿ ಕೇಂದ್ರಗಳಿಗೆ ಏಕರೂಪ ಸಂಹಿತೆಗೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಸ್ವಾಮೀಜಿಯೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.</p>.<p>ದೇಶಾದ್ಯಂತ ಹಿಂದೂ ದೇವಾಲಯಗಳ ಮೇಲೆ ಅಧಿಕಾರಿಗಳ ನಿಯಂತ್ರಣವಿದೆ, ಇತರ ಕೆಲವು ಸಮುದಾಯಗಳ ಧಾರ್ಮಿಕ ಕೇಂದ್ರಗಳ ನಿರ್ವಹಣೆವನ್ನು ಸ್ವಯಂ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂಬುದನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಸ್ವಾಮಿ ಜೀತೇಂದ್ರಾನಂದ್ ಸರಸ್ವತಿ ಎಂಬವರು ಈ ಪಿಐಎಲ್ ಸಲ್ಲಿಸಿದ್ದು, ಹಿಂದೂಗಳು, ಜೈನರು, ಬೌದ್ಧರು ಮತ್ತು ಸಿಖ್ಖರು ತಮ್ಮ ಧಾರ್ಮಿಕ ಚರ-ಸ್ಥಿರ ಆಸ್ತಿಗಳನ್ನು ಹೊಂದಲು, ನಿರ್ವಹಿಸಲು ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಪಾರ್ಸಿಗಳ ರೀತಿಯೇ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಘೋಷಿಸಲು ನಿರ್ದೇಶನ ನೀಡಬೇಕೆಂದು ಕೋರಲಾಗಿದೆ.</p>.<p>ಹಿಂದೂಗಳು ಮತ್ತು ಸಿಖ್ಖರಂತಹ ಕೆಲವು ಧಾರ್ಮಿಕ ಪಂಗಡಗಳ ಧಾರ್ಮಿಕ ಸ್ಥಳಗಳನ್ನು ನಿಯಂತ್ರಿಸುವ ಮೂಲಕ ಧಾರ್ಮಿಕ ವ್ಯವಹಾರಗಳ ನಿರ್ವಹಣೆಯ ವಿಷಯದಲ್ಲಿ ರಾಜ್ಯಗಳು ತಾರತಮ್ಯ ಮಾಡುತ್ತಿವೆ ಎಂದು ಅರ್ಜಿದಾರರು ವಾದಿಸಿದ್ದಾರೆ.</p>.<p>ಕಲಂ 26-27ರ ಅನ್ವಯ ಧಾರ್ಮಿಕ ವ್ಯವಹಾರಗಳ ನಿರ್ವಹಣೆಯ ವಿಷಯದಲ್ಲಿ ಧರ್ಮಗಳ ನಡುವೆ ಯಾವುದೇ ತಾರತಮ್ಯ ಮಾಡುವಂತಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.</p>.<p>ರಾಜ್ಯಗಳು ಸಂವಿಧಾನಾತ್ಮಕವಾಗಿ ಸಮರ್ಥವಾಗಿಲ್ಲ ಅಥವಾ ಧಾರ್ಮಿಕ ವ್ಯವಹಾರಗಳ ನಿರ್ವಹಣೆಯನ್ನು ಮಾಡುವ ಸಾಮರ್ಥ್ಯ ಹೊಂದಿಲ್ಲ. ಧಾರ್ಮಿಕ ಆಚರಣೆಗಳು ಮತ್ತು ನಂಬಿಕೆಗಳು ವೈಯಕ್ತಿಕವಾದುದಾಗಿವೆ ಎಂದು ವಿವರಿಸಿದ್ದಾರೆ.</p>.<p>ವಕೀಲ ಸಂಜಯ್ ಕುಮಾರ್ ಪಾಠಕ್ ಮೂಲಕ ಸಲ್ಲಿಸಲಾದ ಮನವಿಯು 'ಧಾರ್ಮಿಕ ಮತ್ತು ದತ್ತಿ ಕೇಂದ್ರಗಳಿಗೆ ಏಕರೂಪ ಸಂಹಿತೆ' ರೂಪಿಸಲು ಕೇಂದ್ರ ಅಥವಾ ಭಾರತದ ಕಾನೂನು ಆಯೋಗಕ್ಕೆ ನಿರ್ದೇಶನ ನೀಡಲು ಕೋರಿದೆ.</p>.<p>ಈ ಹಿಂದೆ, ಇದೇ ರೀತಿ, ಧಾರ್ಮಿಕ ಮತ್ತು ದತ್ತಿಗಳಿಗೆ ಏಕರೂಪದ ಸಂಹಿತೆಯನ್ನು ಕೋರಿ ದೇಶದಾದ್ಯಂತ ಹಿಂದೂ ದೇವಾಲಯಗಳ ಮೇಲೆ ಅಧಿಕಾರಿಗಳ ನಿಯಂತ್ರಣವನ್ನು ಉಲ್ಲೇಖಿಸಿ ವಕೀಲ ಮತ್ತು ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>