ಸ್ವಾಮಿ ಜೀತೇಂದ್ರಾನಂದ್ ಸರಸ್ವತಿ ಎಂಬವರು ಈ ಪಿಐಎಲ್ ಸಲ್ಲಿಸಿದ್ದು, ಹಿಂದೂಗಳು, ಜೈನರು, ಬೌದ್ಧರು ಮತ್ತು ಸಿಖ್ಖರು ತಮ್ಮ ಧಾರ್ಮಿಕ ಚರ-ಸ್ಥಿರ ಆಸ್ತಿಗಳನ್ನು ಹೊಂದಲು, ನಿರ್ವಹಿಸಲು ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಪಾರ್ಸಿಗಳ ರೀತಿಯೇ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಘೋಷಿಸಲು ನಿರ್ದೇಶನ ನೀಡಬೇಕೆಂದು ಕೋರಲಾಗಿದೆ.