ಮುಂಬೈ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮರಾಠಿ ಮಾತನಾಡುವ ಅಭ್ಯರ್ಥಿ ವಿರುದ್ಧ ಪ್ರಚಾರ ನಡೆಸಿದ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರ ಕ್ರಮವನ್ನು ಶಿವಸೇನಾ ಮತ್ತು ಎನ್ಸಿಪಿ ಟೀಕಿಸಿದೆ.
ಬೆಳಗಾವಿಯಲ್ಲಿ ಮರಾಠಿ ಭಾಷಿಕ ಅಭ್ಯರ್ಥಿಯ ವಿರುದ್ಧ ಮಹಾರಾಷ್ಟ್ರದ ನಾಯಕರು ಪ್ರಚಾರ ಮಾಡಬಾರದು ಎಂದು ಶಿವಸೇನಾದ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ.
‘ಈ ರೀತಿ ಪ್ರಚಾರ ಮಾಡುವ ಮೂಲಕ ಬೆಳಗಾವಿಯ ಮರಾಠಿಗರಿಗೆ ಬಿಜೆಪಿಯು ದ್ರೋಹ ಬಗೆದಿದೆ’ ಎಂದು ಎನ್ಸಿಪಿ ಅಧ್ಯಕ್ಷ ಹಾಗೂ ರಾಜ್ಯ ಜಲ ಸಂಪನ್ಮೂಲ ಖಾತೆ ಸಚಿವ ಜಯಂತ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.