ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಾಠಿ ಭಾಷಿಕ ಅಭ್ಯರ್ಥಿ ವಿರುದ್ಧ ‌ಫಡ್ನವೀಸ್ ಪ್ರಚಾರ: ಶಿವಸೇನಾ, ಎನ್‌ಸಿಪಿ ಟೀಕೆ

ಬೆಳಗಾವಿಯಲ್ಲಿ ದೇವೇಂದ್ರ ಫಡ್ನವೀಸ್‌ ಪ್ರಚಾರ
Last Updated 16 ಏಪ್ರಿಲ್ 2021, 12:45 IST
ಅಕ್ಷರ ಗಾತ್ರ

ಮುಂಬೈ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮರಾಠಿ ಮಾತನಾಡುವ ಅಭ್ಯರ್ಥಿ ವಿರುದ್ಧ ಪ್ರಚಾರ ನಡೆಸಿದ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರ ಕ್ರಮವನ್ನು ಶಿವಸೇನಾ ಮತ್ತು ಎನ್‌ಸಿಪಿ ಟೀಕಿಸಿದೆ.

ಬೆಳಗಾವಿಯಲ್ಲಿ ಮರಾಠಿ ಭಾಷಿಕ ಅಭ್ಯರ್ಥಿಯ ವಿರುದ್ಧ ಮಹಾರಾಷ್ಟ್ರದ ನಾಯಕರು ಪ್ರಚಾರ ಮಾಡಬಾರದು ಎಂದು ಶಿವಸೇನಾದ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ.

‘ಈ ರೀತಿ ಪ್ರಚಾರ ಮಾಡುವ ಮೂಲಕ ಬೆಳಗಾವಿಯ ಮರಾಠಿಗರಿಗೆ ಬಿಜೆಪಿಯು ದ್ರೋಹ ಬಗೆದಿದೆ’ ಎಂದು ಎನ್‌ಸಿಪಿ ಅಧ್ಯಕ್ಷ ಹಾಗೂ ರಾಜ್ಯ ಜಲ ಸಂಪನ್ಮೂಲ ಖಾತೆ ಸಚಿವ ಜಯಂತ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT