’ಭಾರತದಲ್ಲಿ ಕೊರೊನಾ ವೈರಸ್ ತೀವ್ರಗತಿಯಲ್ಲಿ ಹರಡುತ್ತಿದೆ. ಹಾಗಾಗಿ ಭಾರತದಿಂದ ವಿಶ್ವಕ್ಕೆ ಬೆದರಿಕೆಯಿದೆ ಎಂದು ಯುನಿಸೆಫ್ ಆತಂಕ ವ್ಯಕ್ತಪಡಿಸಿದೆ. ಅಲ್ಲದೆ ಹೆಚ್ಚಿನ ರಾಷ್ಟ್ರಗಳು ಕೋವಿಡ್ ವಿರುದ್ಧ ಹೋರಾಡಲು ಭಾರತಕ್ಕೆ ನೆರವು ನೀಡಬೇಕು ಎಂದು ಮನವಿ ಮಾಡಿದೆ. ಬಾಂಗ್ಲಾದೇಶ 10 ಸಾವಿರ ರೆಮ್ಡಿಸಿವಿರ್ ಬಾಟಲಿಗಳನ್ನು ನೀಡಿದೆ. ಭೂತಾನ್ ವೈದ್ಯಕೀಯ ಆಮ್ಲಜನಕವನ್ನು ಕಳುಹಿಸಿದೆ. ನೇಪಾಳ,ಮ್ಯಾನ್ಮಾರ್, ಶ್ರೀಲಂಕಾ ಕೂಡ ‘ಆತ್ಮನಿರ್ಭರ’ ಭಾರತಕ್ಕೆ ಸಹಾಯ ಹಸ್ತ ಚಾಚಿದೆ’ ಎಂದು ಶಿವಸೇನಾ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.