ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ವಿಚಾರಣೆಗೆ ಕಾಂಗ್ರೆಸ್ ಪ್ರತಿಭಟನೆ: ಸುರ್ಜೇವಾಲಾ ಸೇರಿ ಹಲವರು ವಶಕ್ಕೆ

Last Updated 14 ಜೂನ್ 2022, 7:02 IST
ಅಕ್ಷರ ಗಾತ್ರ

ನವದೆಹಲಿ:ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಇ.ಡಿ) ರಾಹುಲ್‌ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್‌ನ ಹಲವು ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಸಂಬಂಧರಾಹುಲ್‌ ಮಂಗಳವಾರವೂ ವಿಚಾರಣೆಗೆ ಹಾಜರಾಗಿದ್ದಾರೆ. ಇ.ಡಿ. ಅಧಿಕಾರಿಗಳು ಸೋಮವಾರಹತ್ತು ಗಂಟೆಗೂ ಹೆಚ್ಚು ಸಮಯವಿಚಾರಣೆ ನಡೆಸಿದ್ದರು.

ರಣದೀಪ್‌ ಸುರ್ಜೇವಾಲಾ, ಲೋಕಸಭೆ ಸಂಸದಮಾಣಿಕಂ ಟಾಗೋರ್‌, ಪಿ.ಎಲ್‌.ಪೂನಿಯಾ ಸೇರಿದಂತೆ ಹಲವರನ್ನು ಪಕ್ಷದ ಪ್ರಧಾನ ಕಚೇರಿ ಎದುರು ವಶಕ್ಕೆ ಪಡೆಯಲಾಗಿದೆ.

ಚಲಿಸುತ್ತಿರುವ ಬಸ್‌ನಿಂದಲೇ ವಿಡಿಯೊ ಮಾಡಿರುವ ಟಾಗೋರ್‌, 'ಪೊಲೀಸರು ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗುತ್ತಿದೆ. ಅಮಿತ್‌ ಶಾ ಅವರ ಶಕ್ತಿ ನಮ್ಮನ್ನು ತಡೆಯಲಾಗದು' ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT