ರಾಜ್ಯದ ಪೊಲೀಸ್ ಮುಖಸ್ಥ ಅನಿಲ್ ಕಾಂತ್ ಅವರ ನಿರ್ದೇಶನಗಳ ಅನ್ವಯ ಕಾಂಗ್ರೆಸ್ನ ಮಾಜಿ ಮುಖಂಡ ಜಾರ್ಜ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಕ್ರಮಕೈಗೊಂಡಿದ್ದಾರೆ. ಐಪಿಸಿ ಸೆಕ್ಷನ್ 153–ಎ (ಎರಡು ಗುಂಪುಗಳ ನಡುವೆ ದ್ವೇಷ ಹರಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ತಿರುವನಂತಪುರಕ್ಕೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.