ಈ ಬಗ್ಗೆ ಭಾನುವಾರ ಬೆಳಗ್ಗೆ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿರುವ ಡಿಸಿಜಿಐನ ವಿ.ಜಿ. ಸೋಮಾನಿ, ಸುರಕ್ಷತೆಯ ಬಗ್ಗೆ ಅಲ್ಪಸ್ವಲ್ಪ ಅನುಮಾನ ಇದ್ದಿದ್ದರೆ ನಾವಿದನ್ನು ಅನುಮೋದಿಸುವುದಿಲ್ಲ. ಲಸಿಕೆಗಳು ಶೇಕಡಾ 100ರಷ್ಟು ಸುರಕ್ಷಿತವಾಗಿದೆ. ಜ್ವರ ಹಾಗೂ ಅಲರ್ಜಿಯಂತಹ ಕೆಲವು ಅಡ್ಡ ಪರಿಣಾಮಗಳು ಪ್ರತಿ ಲಸಿಕೆಯಲ್ಲೂ ಸಾಮಾನ್ಯವಾಗಿದೆ. ಜನರು ಶಕ್ತಿಹೀನರಾಗುತ್ತಾರೆ ಎಂಬುದು ಅಸಂಬದ್ಧ ಎಂದು ಹೇಳಿದರು.
ಸಮರ್ಪಕ ಪರೀಕ್ಷೆಯ ಬಳಿಕ ತಜ್ಞರ ಸಮಿತಿಯ ಶಿಫಾರಸುಗಳನ್ನು ಸ್ವೀಕರಿಸಲು ಸಿಆರ್ಎಸ್ಸಿಒ ನಿರ್ಧರಿಸಿದೆ. ಅದರ ಪ್ರಕಾರ ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗೆ ಸೆರಂ ಮತ್ತು ಭಾರತ ಬಯೋಟೆಕ್ ಲಸಿಕೆಗಳಿಗೆ ಅನುಮೋದನೆ ನೀಡಲಾಗುತ್ತಿದೆ ಎಂದು ಹೇಳಿದರು.