ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಅರಿವಿಲ್ಲದೇ ಲಸಿಕೆ ಅಭಿಯಾನ' ಎಂಬ ಹೇಳಿಕೆಯಿಂದ ದೂರ ಉಳಿದ ಸೀರಂ ಇನ್‌ಸ್ಟಿಟ್ಯೂಟ್

Last Updated 23 ಮೇ 2021, 11:39 IST
ಅಕ್ಷರ ಗಾತ್ರ

ನವದೆಹಲಿ: ‘ಲಸಿಕೆ ಲಭ್ಯತೆ ಅರಿವಿಲ್ಲದೇ ಎಲ್ಲ ವರ್ಷದವರಿಗೆ ಕೇಂದ್ರ ಸರ್ಕಾರ ಲಸಿಕೆ ಅಭಿಯಾನ ಆರಂಭಿಸಿತು’ ಎಂಬ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಸೀರಂ ಇನ್‌ಸ್ಟಿಟ್ಯೂಟ್‌ ನಿರ್ಧರಿಸಿದೆ.

‘ಈ ಹೇಳಿಕೆಯು ಕಂಪನಿಯ ನಿಲುವಲ್ಲ’ ಎಂದೂ ಸ್ಪಷ್ಟಪಡಿಸಿದೆ. ಈ ಕುರಿತು ಮೇ 22ರಂದು ಕೇಂದ್ರ ಆರೋಗ್ಯ ಸಚಿವಾಲ‌ಯದ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರಿಗೆ ಪತ್ರ ಬರೆದು ಸ್ಪಷ್ಟನೆ ನೀಡಿದೆ.

‘ಕಂಪನಿಯ ಸಿಇಒ ಆದಾರ್ ಪೂನಾವಾಲಾ ಪರವಾಗಿ ಸ್ಪಷ್ಟನೆ ನೀಡುತ್ತಿದೆ. ಅದು ಕಂಪನಿಯು ನೀಡಿದ ಹೇಳಿಕೆಯಲ್ಲ. ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಪೂನಾವಾಲಾ ಅವರಷ್ಟೇ ಕಂಪನಿಯ ಅಧಿಕೃತ ವಕ್ತಾರರು’ ಎಂದು ತಿಳಿಸಿದೆ.

ಸೀರಂ ಇನ್‌ಸ್ಟಿಟ್ಯೂಟ್ ಸದ್ಯ ಕೋವಿಶೀಲ್ಡ್‌ ಲಸಿಕೆಯ ಉತ್ಪಾದನೆ ಪ್ರಮಾಣವನ್ನು ಹೆಚ್ಚಿಸಲು ಹಾಗೂ ಕೋವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆಗೆ ಕೈಜೋಡಿಸಲಿದೆ ಎಂದು ಈ ಹೇಳಿಕೆಯು ಭರವಸೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT