‘ಬೆಲೆ ಏರಿಕೆ, ಹೆಚ್ಚುತ್ತಿರುವ ಇಂಧನ ದರ, ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ರೈತರ ಹೋರಾಟದಂಥ ವಿಷಯಗಳ ಬಗ್ಗೆ ಮಾತನಾಡಲುಅಧಿವೇಶನ ಆರಂಭವಾದ ದಿನದಿಂದಲೂ ವಿರೋಧ ಪಕ್ಷಗಳ ಸದಸ್ಯರು ಸಜ್ಜಾಗಿದ್ದರು. ಆದರೆ, ಸರ್ಕಾರ ಅವಕಾಶ ಕೊಡಲಿಲ್ಲ. ಯಾರು ಸರಿ–ಯಾರು ತಪ್ಪು? ಅಥವಾ ಯಾವ ಬೇಡಿಕೆ ಸರಿಯಾದುದು, ಯಾವುದು ಅಲ್ಲ ಎಂಬುದನ್ನು ಹೇಳುವುದು ಸರ್ಕಾರದ ಕೆಲಸವಲ್ಲ. ತನ್ನ ಮೂಗಿನ ನೇರಕ್ಕೇ ನಡೆದುಕೊಳ್ಳುವಂತಹ ಸರ್ಕಾರ ದೇಶಕ್ಕೆ ಒಳ್ಳೆಯದಲ್ಲ ಹಾಗೂ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾದುದು’ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧಿರ್ ರಂಜನ್ ಚೌಧರಿ ಆರೋಪಿಸಿದರು.