<p><strong>ಇಂಫಾಲ/ಗುವಾಹಟಿ/ ಇಟಾನಗರ</strong>: ಮಣಿಪುರದ ನೊನಿ ಜಿಲ್ಲೆಯ ರೈಲ್ವೆ ಕಾಮಗಾರಿ ಪ್ರದೇಶದಲ್ಲಿ ಭಾರಿ ಭೂಕುಸಿತವಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. 25 ಮಂದಿಯನ್ನು ರಕ್ಷಿಸಲಾಗಿದ್ದು, 50ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ.</p>.<p>ತುಪುಲ್ ಯಾರ್ಡ್ ರೈಲ್ವೆ ಕಾಮಗಾರಿ ಶಿಬಿರದ ಬಳಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ.</p>.<p>‘ಈವರೆಗೆ ಒಟ್ಟು 8 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇದರಲ್ಲಿ ‘ಟೆರಿಟೋರಿಯಲ್ ಆರ್ಮಿಯ’ ಏಳು ಮಂದಿ ಸೇರಿದ್ದಾರೆ. 50ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಅವರೆಲ್ಲಾ ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದ್ದು ರಕ್ಷಣಾ ಕಾರ್ಯ ಚುರುಕುಗೊಳಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಕುಸಿದಿರುವ ಮಣ್ಣೆಲ್ಲಾಇಜೆಯಿ ನದಿಯಲ್ಲಿ ಸಂಗ್ರಹವಾಗಿದೆ. ಅದರಿಂದ ನದಿ ನೀರಿನ ಸರಾಗ ಹರಿಯುವಿಕೆಗೆ ತೊಡಕಾಗಿದೆ. ಸ್ಥಳದಲ್ಲಿ ಭಾರಿ ಪ್ರಮಾಣದಲ್ಲಿ ನೀರು ಶೇಖರಣೆಯಾಗಿ ಜಲಾಶಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನೀರು ನದಿ ಪಾತ್ರದ ತಗ್ಗು ಪ್ರದೇಶಗಳಿಗೆ ನುಗ್ಗುವ ಸಾಧ್ಯತೆ ಇರುವುದರಿಂದ ಸಾಧ್ಯವಿದ್ದಲ್ಲಿಂದ ನಾಗರಿಕರನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>ಅವಶೇಷಗಳ ಅಡಿ ಸಿಲುಕಿರುವವರನ್ನು ಪತ್ತೆಹಚ್ಚುವುದಕ್ಕಾಗಿ ಶ್ವಾನ ದಳವನ್ನೂ ನಿಯೋಜಿಸಲಾಗಿದೆ. ಸ್ಥಳೀಯ ಆಡಳಿತವು ಜೆಸಿಬಿ ಹಾಗೂಇತರ ಬೃಹತ್ ಯಂತ್ರಗಳ ಸಹಾಯ<br />ದಿಂದ ಘಟನಾ ಸ್ಥಳದಲ್ಲಿ ಸಂಗ್ರಹವಾಗಿರುವ ಭಾರಿ ಪ್ರಮಾಣದ ಮಣ್ಣನ್ನು ಹೊರತೆಗೆಯುವ ಕೆಲಸ ಮಾಡುತ್ತಿದೆ.</p>.<p>‘ತುರ್ತು ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಸ್ಥಳಕ್ಕೆ ಆಂಬುಲೆನ್ಸ್ ಹಾಗೂ ವೈದ್ಯರನ್ನು ನಿಯೋಜಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50 ಸಾವಿರ ನೆರವು ನೀಡಲಾಗುತ್ತದೆ’ ಎಂದು ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ಟ್ವೀಟ್ ಮಾಡಿದ್ದಾರೆ.</p>.<p><strong>ಮಾಹಿತಿ ಪಡೆದ ಅಮಿತ್ ಶಾ</strong>: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರುಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೆ ದೂರವಾಣಿ ಕರೆ ಮಾಡಿ ಘಟನೆ ಕುರಿತ ಮಾಹಿತಿ ಪಡೆದಿದ್ದಾರೆ.</p>.<p>‘ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ತಂಡವೊಂದು ಈಗಾಗಲೇ ಘಟನಾ ಸ್ಥಳ ತಲುಪಿದೆ. ಎನ್ಡಿಆರ್ಎಫ್ನ ಮತ್ತೆರಡು ತಂಡಗಳೂ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಳ್ಳಲಿವೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>ಭೂ ಕುಸಿತ–ಮಹಿಳೆ ಮೃತದೇಹ ಪತ್ತೆ: ಅರುಣಾಚಲಪ್ರದೇಶದ ಪಪುಮ್ ಪರೆ ಜಿಲ್ಲೆಯಲ್ಲಿ ನಡೆದಿದ್ದ ಭೂ ಕುಸಿತದಲ್ಲಿ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದಾರೆ.</p>.<p>‘27 ವರ್ಷದ ಮೊಮಿತಾ ಚಾಕ್ಮ ಮೃತ ಮಹಿಳೆ. ಬಲಿಜಾನ್ನ ಚಕ್ಮಾ ಶಿಬಿರ–1ರ ಬಳಿಯ ಅವಶೇಷಗಳ ಅಡಿ<br />ಯಲ್ಲಿ ಸಿಲುಕಿದ್ದ ಮೃತದೇಹವನ್ನು ಗುರುವಾರ ಹೊರತೆಗೆಯಲಾಗಿದೆ. ಇದ<br />ರೊಂದಿಗೆ ಪ್ರವಾಹ ಹಾಗೂ ಭೂ ಕುಸಿತದಿಂದಾಗಿ ಈ ವರ್ಷ ರಾಜ್ಯದಲ್ಲಿ ಮೃತರಾದವರ ಸಂಖ್ಯೆ 18ಕ್ಕೆ<br />ಹೆಚ್ಚಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ/ಗುವಾಹಟಿ/ ಇಟಾನಗರ</strong>: ಮಣಿಪುರದ ನೊನಿ ಜಿಲ್ಲೆಯ ರೈಲ್ವೆ ಕಾಮಗಾರಿ ಪ್ರದೇಶದಲ್ಲಿ ಭಾರಿ ಭೂಕುಸಿತವಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. 25 ಮಂದಿಯನ್ನು ರಕ್ಷಿಸಲಾಗಿದ್ದು, 50ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ.</p>.<p>ತುಪುಲ್ ಯಾರ್ಡ್ ರೈಲ್ವೆ ಕಾಮಗಾರಿ ಶಿಬಿರದ ಬಳಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ.</p>.<p>‘ಈವರೆಗೆ ಒಟ್ಟು 8 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇದರಲ್ಲಿ ‘ಟೆರಿಟೋರಿಯಲ್ ಆರ್ಮಿಯ’ ಏಳು ಮಂದಿ ಸೇರಿದ್ದಾರೆ. 50ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಅವರೆಲ್ಲಾ ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದ್ದು ರಕ್ಷಣಾ ಕಾರ್ಯ ಚುರುಕುಗೊಳಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಕುಸಿದಿರುವ ಮಣ್ಣೆಲ್ಲಾಇಜೆಯಿ ನದಿಯಲ್ಲಿ ಸಂಗ್ರಹವಾಗಿದೆ. ಅದರಿಂದ ನದಿ ನೀರಿನ ಸರಾಗ ಹರಿಯುವಿಕೆಗೆ ತೊಡಕಾಗಿದೆ. ಸ್ಥಳದಲ್ಲಿ ಭಾರಿ ಪ್ರಮಾಣದಲ್ಲಿ ನೀರು ಶೇಖರಣೆಯಾಗಿ ಜಲಾಶಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನೀರು ನದಿ ಪಾತ್ರದ ತಗ್ಗು ಪ್ರದೇಶಗಳಿಗೆ ನುಗ್ಗುವ ಸಾಧ್ಯತೆ ಇರುವುದರಿಂದ ಸಾಧ್ಯವಿದ್ದಲ್ಲಿಂದ ನಾಗರಿಕರನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>ಅವಶೇಷಗಳ ಅಡಿ ಸಿಲುಕಿರುವವರನ್ನು ಪತ್ತೆಹಚ್ಚುವುದಕ್ಕಾಗಿ ಶ್ವಾನ ದಳವನ್ನೂ ನಿಯೋಜಿಸಲಾಗಿದೆ. ಸ್ಥಳೀಯ ಆಡಳಿತವು ಜೆಸಿಬಿ ಹಾಗೂಇತರ ಬೃಹತ್ ಯಂತ್ರಗಳ ಸಹಾಯ<br />ದಿಂದ ಘಟನಾ ಸ್ಥಳದಲ್ಲಿ ಸಂಗ್ರಹವಾಗಿರುವ ಭಾರಿ ಪ್ರಮಾಣದ ಮಣ್ಣನ್ನು ಹೊರತೆಗೆಯುವ ಕೆಲಸ ಮಾಡುತ್ತಿದೆ.</p>.<p>‘ತುರ್ತು ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಸ್ಥಳಕ್ಕೆ ಆಂಬುಲೆನ್ಸ್ ಹಾಗೂ ವೈದ್ಯರನ್ನು ನಿಯೋಜಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50 ಸಾವಿರ ನೆರವು ನೀಡಲಾಗುತ್ತದೆ’ ಎಂದು ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ಟ್ವೀಟ್ ಮಾಡಿದ್ದಾರೆ.</p>.<p><strong>ಮಾಹಿತಿ ಪಡೆದ ಅಮಿತ್ ಶಾ</strong>: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರುಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೆ ದೂರವಾಣಿ ಕರೆ ಮಾಡಿ ಘಟನೆ ಕುರಿತ ಮಾಹಿತಿ ಪಡೆದಿದ್ದಾರೆ.</p>.<p>‘ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ತಂಡವೊಂದು ಈಗಾಗಲೇ ಘಟನಾ ಸ್ಥಳ ತಲುಪಿದೆ. ಎನ್ಡಿಆರ್ಎಫ್ನ ಮತ್ತೆರಡು ತಂಡಗಳೂ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಳ್ಳಲಿವೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>ಭೂ ಕುಸಿತ–ಮಹಿಳೆ ಮೃತದೇಹ ಪತ್ತೆ: ಅರುಣಾಚಲಪ್ರದೇಶದ ಪಪುಮ್ ಪರೆ ಜಿಲ್ಲೆಯಲ್ಲಿ ನಡೆದಿದ್ದ ಭೂ ಕುಸಿತದಲ್ಲಿ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದಾರೆ.</p>.<p>‘27 ವರ್ಷದ ಮೊಮಿತಾ ಚಾಕ್ಮ ಮೃತ ಮಹಿಳೆ. ಬಲಿಜಾನ್ನ ಚಕ್ಮಾ ಶಿಬಿರ–1ರ ಬಳಿಯ ಅವಶೇಷಗಳ ಅಡಿ<br />ಯಲ್ಲಿ ಸಿಲುಕಿದ್ದ ಮೃತದೇಹವನ್ನು ಗುರುವಾರ ಹೊರತೆಗೆಯಲಾಗಿದೆ. ಇದ<br />ರೊಂದಿಗೆ ಪ್ರವಾಹ ಹಾಗೂ ಭೂ ಕುಸಿತದಿಂದಾಗಿ ಈ ವರ್ಷ ರಾಜ್ಯದಲ್ಲಿ ಮೃತರಾದವರ ಸಂಖ್ಯೆ 18ಕ್ಕೆ<br />ಹೆಚ್ಚಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>