ಜಲಾನ್: ಹಲವು ರಾಜ್ಯಗಳಲ್ಲಿ ಹಕ್ಕಿ ಜ್ವರದ ಭೀತಿ ಎದುರಾಗಿರುವ ಬೆನ್ನಲ್ಲೇ ಹಲವು ಕಡೆ ಪಕ್ಷಿಗಳು ಸಾವಿಗೀಡಾಗುತ್ತಿರುವುದು ಮುಂದುವರಿಯುತ್ತಲೇ ಇದೆ. ಉತ್ತರ ಪ್ರದೇಶದ ಜಲಾನ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಐದು ನವಿಲುಗಳು, ನಾಲ್ಕು ಪಾರಿವಾಳಗಳು ಮತ್ತು ನಾಲ್ಕು ಕಾಗೆಗಳ ಮೃತ ದೇಹಗಳು ಪತ್ತೆಯಾಗಿದ್ದು,ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.