<p><strong>ಲಖನೌ:</strong> ಕೇಂದ್ರ ಸರ್ಕಾರದ ವಿವಾದಿತ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯಲ್ಲಿ ಭಾನುವಾರ 'ರೈತರ ಮಹಾ ಪಂಚಾಯತ್' ಆಯೋಜಿಸಿವೆ.</p>.<p>ರೈತ ಸಂಘಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಆಯೋಜಿಸಿದ ಮಹಾ ಪಂಚಾಯತ್ನಲ್ಲಿ ವಿವಿಧ ರಾಜ್ಯಗಳಿಂದ ಭಾರಿ ಸಂಖ್ಯೆಯಲ್ಲಿ ರೈತರು ಭಾಗವಹಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/will-ally-only-with-small-parties-for-uttar-pradesh-polls-congs-state-chief-864091.html" itemprop="url">ಉತ್ತರ ಪ್ರದೇಶ ಚುನಾವಣೆ| ಸಣ್ಣ ಪಕ್ಷಗಳ ಜತೆ ಕಾಂಗ್ರೆಸ್ ಮೈತ್ರಿ: ಅಜಯ್ಕುಮಾರ್ </a></p>.<p>ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ರೈತರ ಸಮಾವೇಶವು ಹೆಚ್ಚಿನ ಮಹತ್ವವನ್ನು ಗಿಟ್ಟಿಸಿದೆ.</p>.<p>'ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 300ಕ್ಕೂ ಹೆಚ್ಚು ರೈತ ಸಂಘಗಳ ಕಾರ್ಯಕರ್ತರು ಕಿಸಾನ್ ಮಹಾ ಪಂಚಾಯತ್ನಲ್ಲಿ ಭಾಗವಹಿಸಿದ್ದಾರೆ' ಎಂದು ಭಾರತೀಯ ಕಿಸಾನ್ ಒಕ್ಕೂಟದ ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ಹೇಳಿದ್ದಾರೆ.</p>.<p>5,000ಕ್ಕೂ ಹೆಚ್ಚು ಫುಡ್ ಸ್ಟಾಲ್, ಮೊಬೈಲ್ ಸ್ಟಾಲ್ ಹಾಗೂ 100ಕ್ಕೂ ಹೆಚ್ಚು ವೈದ್ಯಕೀಯ ಕ್ಯಾಂಪ್ಗಳನ್ನು ಸ್ಥಾಪಿಸಲಾಗಿತ್ತು. ವಿವಿಧ ರೈತ ಸಂಘಗಳಿಗೆ ಸೇರಿದ ಮಹಿಳೆಯರೂ ಭಾಗವಹಿಸಿದ್ದರು.</p>.<p>ಪಂಜಾಬ್ನ ಒಟ್ಟು 32 ರೈತ ಸಂಘಗಳು ರೈತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ಸೆಪ್ಟೆಂಬರ್ 8ರ ಗಡುವನ್ನು ನೀಡಿದೆ. ಪ್ರಕರಣಗಳನ್ನು ಹಿಂಪಡೆಯದಿದ್ದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಯನ್ನು ನಡೆಸಲು ಮಾರ್ಗಸೂಚಿ ರಚಿಸುವುದಾಗಿ ಎಚ್ಚರಿಸಿದೆ.</p>.<p>ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ಕಳೆದ ಒಂಬತ್ತು ತಿಂಗಳಿಗಿಂತಲೂ ಹೆಚ್ಚು ಸಮಯದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಕೇಂದ್ರ ಸರ್ಕಾರದ ವಿವಾದಿತ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯಲ್ಲಿ ಭಾನುವಾರ 'ರೈತರ ಮಹಾ ಪಂಚಾಯತ್' ಆಯೋಜಿಸಿವೆ.</p>.<p>ರೈತ ಸಂಘಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಆಯೋಜಿಸಿದ ಮಹಾ ಪಂಚಾಯತ್ನಲ್ಲಿ ವಿವಿಧ ರಾಜ್ಯಗಳಿಂದ ಭಾರಿ ಸಂಖ್ಯೆಯಲ್ಲಿ ರೈತರು ಭಾಗವಹಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/will-ally-only-with-small-parties-for-uttar-pradesh-polls-congs-state-chief-864091.html" itemprop="url">ಉತ್ತರ ಪ್ರದೇಶ ಚುನಾವಣೆ| ಸಣ್ಣ ಪಕ್ಷಗಳ ಜತೆ ಕಾಂಗ್ರೆಸ್ ಮೈತ್ರಿ: ಅಜಯ್ಕುಮಾರ್ </a></p>.<p>ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ರೈತರ ಸಮಾವೇಶವು ಹೆಚ್ಚಿನ ಮಹತ್ವವನ್ನು ಗಿಟ್ಟಿಸಿದೆ.</p>.<p>'ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 300ಕ್ಕೂ ಹೆಚ್ಚು ರೈತ ಸಂಘಗಳ ಕಾರ್ಯಕರ್ತರು ಕಿಸಾನ್ ಮಹಾ ಪಂಚಾಯತ್ನಲ್ಲಿ ಭಾಗವಹಿಸಿದ್ದಾರೆ' ಎಂದು ಭಾರತೀಯ ಕಿಸಾನ್ ಒಕ್ಕೂಟದ ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ಹೇಳಿದ್ದಾರೆ.</p>.<p>5,000ಕ್ಕೂ ಹೆಚ್ಚು ಫುಡ್ ಸ್ಟಾಲ್, ಮೊಬೈಲ್ ಸ್ಟಾಲ್ ಹಾಗೂ 100ಕ್ಕೂ ಹೆಚ್ಚು ವೈದ್ಯಕೀಯ ಕ್ಯಾಂಪ್ಗಳನ್ನು ಸ್ಥಾಪಿಸಲಾಗಿತ್ತು. ವಿವಿಧ ರೈತ ಸಂಘಗಳಿಗೆ ಸೇರಿದ ಮಹಿಳೆಯರೂ ಭಾಗವಹಿಸಿದ್ದರು.</p>.<p>ಪಂಜಾಬ್ನ ಒಟ್ಟು 32 ರೈತ ಸಂಘಗಳು ರೈತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ಸೆಪ್ಟೆಂಬರ್ 8ರ ಗಡುವನ್ನು ನೀಡಿದೆ. ಪ್ರಕರಣಗಳನ್ನು ಹಿಂಪಡೆಯದಿದ್ದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಯನ್ನು ನಡೆಸಲು ಮಾರ್ಗಸೂಚಿ ರಚಿಸುವುದಾಗಿ ಎಚ್ಚರಿಸಿದೆ.</p>.<p>ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ಕಳೆದ ಒಂಬತ್ತು ತಿಂಗಳಿಗಿಂತಲೂ ಹೆಚ್ಚು ಸಮಯದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>