‘ಛತ್ತೀಸಗಡ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಲಾಗಿದೆ. ಹೀಗಾಗಿ, ಈ ಪ್ರಕರಣವು ಸರ್ಕಾರಕ್ಕೂ ಸಂಬಂಧಿಸಿದೆ ಎನ್ನುವುದನ್ನು ಪರಿಗಣಿಸಿ ಪ್ರತಿವಾದಿಯನ್ನಾಗಿ ಮಾಡಬೇಕು’ ಎಂದು ಸಹ ಆರೋಪಿ ಕೈಲಾಷ್ ಮುರಾಕ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್.ಎಸ್. ರೆಡ್ಡಿ ಅವರನ್ನೊಳಗೊಂಡ ಪೀಠವು, ಸರ್ಕಾರವನ್ನು ಪ್ರತಿವಾದಿಯನ್ನಾಗಿ ಮಾಡಲು ಅವಕಾಶ ಕಲ್ಪಿಸಿತು.