ರಂಜನ್ ಗೊಗೊಯಿ ಅವರು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾಗ ಅವರ ಕಚೇರಿ ಸಿಬ್ಬಂದಿ ಒಬ್ಬರು, ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ವಕೀಲ ಉತ್ಸವ್ ಬೈನ್ಸ್ ಎಂಬುವವರು, ಈ ಆರೋಪದ ಹಿಂದೆ ಸಂಚುಗಳು ಇರುವ ಸಾಧ್ಯತೆ ಇದೆ ಎಂದು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆನಂತರ ನಿವೃತ್ತ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್ ನೇತೃತ್ವದ ತನಿಖಾ ಸಮಿತಿಯನ್ನು ಸುಪ್ರೀಂ ಕೋರ್ಟ್ ರಚಿಸಿತ್ತು. ಈ ಸಮಿತಿಯು ಸಲ್ಲಿಸಿದ್ದ ವರದಿ ಆಧರಿಸಿ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.