ಸಮಾಜವಾದಿ ಪಕ್ಷದ ಆಡಳಿತದ ಅವಧಿಯಲ್ಲಿ ಕೈರಾನಾದಿಂದ ವಲಸೆ ಹೋಗಿದ್ದ ಕುಟುಂಬಗಳು, ಬಿಜೆಪಿ ಆಡಳಿತದಲ್ಲಿ ವಾಪಸ್ ಆಗಿವೆ. ಅಂತಹ ಕುಟುಂಬಗಳನ್ನು, ವ್ಯಾಪಾರಿಗಳನ್ನು ಅಮಿತ್ ಶಾ ಶನಿವಾರ ಭೇಟಿ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ‘ನೀವು ಈಗ ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ಈಗ ನಿಮ್ಮನ್ನು ಕಾಪಾಡುವ ಸರ್ಕಾರವಿದೆ’ ಎಂದು ಎಲ್ಲರಿಗೂ ಅಮಿತ್ ಶಾ ಅಭಯ ನೀಡಿದ್ದಾರೆ.